
ಯಾವುದೇ ಕಲೆಗಳು ಸುಲಭವಾಗಿ ಒಗ್ಗುವುದಿಲ್ಲ. ನಿರಂತರ ಪ್ರಯತ್ನ, ಪರಿಶ್ರಮ ಏಕಾಗ್ರತೆಯೇ ಕಲೆಯನ್ನು ಒಲಿಸಿಕೊಳ್ಳುವುದಕ್ಕೆ ಮಂತ್ರ. ಇದು ಒಂದು ಬಗೆಯ ತಪಸ್ಸು ಎಂದರೆ ತಪ್ಪಾಗಲಾರದು. ವಾದ್ಯ ಸಂಗೀತದಲ್ಲಿ ನಿಪುಣನಾಗುತ್ತಿರುವ ಪುತ್ತೂರಿನ ಸುಮನ್ ಆರ್. ದೇವಾಡಿಗ ಉದಯೋನ್ಮುಖ ಕಲಾವಿದನಾಗಿ ಬೆಳೆಯುತ್ತಿದ್ದಾರೆ. ಸುಮನ್ ಪುತ್ತೂರಿನ ಖ್ಯಾತ ಕೊಳಲು ವಾದಕ ಪಿ.ರಾಜರತ್ನಂ ದೇವಾಡಿಗ ಮತ್ತು ಭಾರತಿ ದಂಪತಿಯ ಪುತ್ರ. ಪಾಶ್ಚಾತ್ಯ ಸಂಗೀತ ವಾದ್ಯವಾದ ಸ್ಯಾಕ್ಸೋಫೋನ್ಅನ್ನು ಕರ್ನಾಟಕ ಶಾಸ್ತ್ರೀಯ ಲೋಕಕ್ಕೆ ಯಶಸ್ವಿಯಾಗಿ ಅಳವಡಿಸಿದ ದಿ.ವೆಂಕಟಪ್ಪ ಡೋಗ್ರರ ಮೊಮ್ಮಗ.
ಮನೆಯ ಕಲಾ ವಾತಾವರಣದ ನಡುವೆ ಬೆಳೆದ ಸುಮನ್ಗೆ ಚಿಕ್ಕಂದಿನಿಂದಲೇ ಕಲೆಯ ಬಗ್ಗೆ ಹೆಚ್ಚು ಆಸಕ್ತಿ. ತನ್ನ ಏಳನೇ ವಯಸ್ಸಿನಿಂದಲೇ ಪುತ್ತೂರಿನ ಖ್ಯಾತ ತಬಲಾ ವಿದ್ವಾಂಸ ಎನ್.ವಿ.ಮೂರ್ತಿಯವರಲ್ಲಿ ತಬಲಾ ಅಭ್ಯಾಸ ಮಾಡುತ್ತಿರುವ ಸುಮನ್, ಕಾರವಾರದ ತಬಲಾ ವಿದ್ವಾಂಸ ಚಂದ್ರಕಾಂತ್ ಗಡ್ಕರ್ರವರಿಂದಲೂ ವಿಶೇಷ ತರಬೇತಿ ಪಡೆದಿದ್ದಾನೆ. ಜೊತೆಗೆ ಕಳೆದ ಮೂರು ವರ್ಷಗಳಿಂದ ಆಕಾಶವಾಣಿ ಕಲಾವಿದರಾದ ಘಟಂ ವಿದ್ವಾನ್ ತಿರುಚ್ಚಿ ಕೆ.ಆರ್.ಕುಮಾರ್ರವರಲ್ಲಿ ಮೃದಂಗ ಕಲಿಯುತ್ತಿದ್ದಾರೆ.
ಕೇಂದ್ರ ಸರಕಾರದ ಸಿ.ಸಿ.ಆರ್.ಟಿ. ಶಿಷ್ಯವೇತನ ಹಾಗೂ ಕರ್ನಾಟಕ ಸರಕಾರದ ಸಂಗೀತ ನಾಟಕ ಅಕಾಡಮಿಯ ಶಿಷ್ಯವೇತನಕ್ಕೂ ಭಾಜನರಾದ ಹಿರಿಮೆ ಸುಮನ್ ರದ್ದು. ಗಾಂಧರ್ವ ಮಹಾ ವಿದ್ಯಾಲಯ ಮೀರಜ್, ಇದರ ವಿದ್ವತ್ ಮಟ್ಟದ ವಿಶಾರದ ಪರೀಕ್ಷೆಯನ್ನು ತನ್ನ 16 ರ ಕಿರಿಯ ವಯಸ್ಸಿನಲ್ಲಿ ಪ್ರಥಮ ಶ್ರೇಣಿಯಲ್ಲಿ ಪಾಸು ಮಾಡಿರುವ ಈತ ಪ್ರಸ್ತುತ ಪುತ್ತೂರಿನ ಸಂತ ಫಿಲೋಮಿನಾ ಕಾಲೇಜಿನ ಅಂತಿಮ ಬಿ.ಎ. ವಿದ್ಯಾರ್ಥಿ.
ರಾಜ್ಯ ಹಾಗೂ ಜಿಲ್ಲಾ ಮಟ್ಟದ ಹಲವಾರು ವಾದ್ಯ ಸಂಗೀತ ಸ್ಪರ್ಧೆಯಲ್ಲಿ ಬಹುಮಾನ ಪಡೆದಿರುವ ಸುಮನ್ ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಅಂತರ್ ಕಾಲೇಜು ಸಂಗೀತ ಸ್ಪರ್ಧೆಯ ತಾಳವಾದ್ಯ ವಿಭಾಗದಲ್ಲಿ ಸತತವಾಗಿ ಮೂರನೇ ಬಾರಿಗೆ ಗೆಲುವು ಸಾಧಿಸಿ ಹ್ಯಾಟ್ರಿಕ್ ಸಾಧನೆ ಮಾಡಿದ್ದಾರೆ. ಕಲಿಕೆಯ ಜೊತೆ ಜೊತೆಗೆ ಜಿಲ್ಲಾದ್ಯಂತ ಹಲವಾರು ಶಾಸ್ತ್ರೀಯ ಸಂಗೀತ, ಭಾವಗೀತಾ ಕಾರ್ಯಕ್ರಮಗಳಲ್ಲಿ ತಬಲ ವಾದಕರಾಗಿಯೂ ಸಾಥ್ ನೀಡಿದ್ದಾರೆ.
ಸುಮನ್ನ ಎಲ್ಲಾ ಕಲಾಚಟುವಟಿಕೆಗೆ ಪ್ರೋತ್ಸಾಹ ನೀಡುತ್ತಿರುವ ಇವನ ಹಂಬಲಕ್ಕೆ ನಿರಂತರ ಬೆಂಬಲ ನೀಡುತ್ತಿರುವ ತಂದೆ ಪಿ.ರಾಜರತ್ನಂ ದೇವಾಡಿಗ ದಂಪತಿ, ಮಗಳು ಮೇಘಾಳ ಕಲಾಸಕ್ತಿಗೂ ಪ್ರೇರಣೆ ನೀಡುತ್ತಿದ್ದಾರೆ. ತಬಲಾ ಹಾಗೂ ಮೃದಂಗದಲ್ಲಿ ಉನ್ನತ ಮಟ್ಟದ ಅಭ್ಯಾಸ ಮಾಡಿ ಒಳ್ಳೆಯ ಕಲಾವಿದ ರಾಗುವ ಆಶಯದೊಂದಿಗೆ ಮುನ್ನಡೆಯುತ್ತಿರುವ ಸುಮನ್ರ ಮುಂದಿನ ಕಲಾ ಬದುಕು ಇನ್ನಷ್ಟು ಸುಮಧುರವಾಗಿರಲಿ...
ದೇಶದ ಮುಂದೆ ನಾಡು ತಲೆತಗ್ಗಿಸುವಂತಹ ಘಟನೆ ರಾಜ್ಯದ ಸದನದಲ್ಲಿ ನಡೆದಿದೆ. ನಾಡಿನ ಇಬ್ಬರು ಸಚಿವರು ಸದನದಲ್ಲೇ ತಮ್ಮ ಮೊಬೈಲ್ ಮೂಲಕ ಬ್ಲೂಫಿಲಂ ನೋಡಿ, ಜನತೆಯ ಮುಂದೆ ರೆಡ್ಹ ...
Click here to post your views ಶಿಕ್ಷಣದ ಹಕ್ಕು ನಮ್ಮ ಸಂವಿಧಾನದಲ್ಲಿ ಮೂಲಭೂತ ಹಕ್ಕು ಅಲ್ಲ. ನಮ್ಮ ದೇಶದಲ್ಲಿ ಒಂದು ಲಕ್ಷಕ್ಕೂ ಹ ...
ಮುಂಬೈ ಚುಕ್ಕಿ ಸಂಕುಲದ ಗೆಳೆಯರ ಬಳಗ ಪ್ರಸ್ತುತ ಪಡಿಸಿದ ನಾಟಕ ‘ಕುವೆಂಪು ಕಂಡ ಮಂಥರೆ’ ಮುಂಬ ...
ಒಂದಲ್ಲ ಒಂದು ಕಾರಣದಿಂದ ಸಮಾಜದಲ್ಲಿ ಬೇರೂರಿರುವ ಅಸಮಾನತೆಯನ್ನು ಹೋಗಲಾಡಿಸಲು ಕೇಂದ್ರ ಮತ್ತು ರ ...
ಹುಬ್ಬಳ್ಳಿಯಲ್ಲಿ ನಡೆದ ಆರೆಸ್ಸೆಸ್ನ ಹಿಂದೂಶಕ್ತಿ ಸಂಗಮ ಕಂಡು ರೋಮಾಂಚಿತಗೊಂಡ ಸ್ನೇಹಿತರ ...
‘ಕರಾವಳಿಯಲ್ಲಿ ಒಳ್ಳೆಯ ಬ್ಯಾರಿಗಳೂ ಇದ್ದಾರೆ ಗೊತ್ತುಂಟಾ... ಗೋ ಸಮಾವೇಶ ಮಾಡಿದ ಹಾಗೆ ನಾವು ಮ ...
ಆಧುನಿಕ ತತ್ವಶಾಸದ ಇತಿಹಾಸದಲ್ಲಿ ಸ್ವಾಮಿ ವಿವೇಕಾನಂದರಿಗೆ ಪ್ರಮುಖವಾದ ಸ್ಥಾನವಿದೆ.ವೇದಾಂತ ...
ನಾನು ಮನೋವೈದ್ಯೆಯಲ್ಲ.ಆದರೆ ಮನಸ್ಸನ್ನು ಪ್ರೀತಿಸುವುದರಿಂದ ಮಾತ್ರ ಈ ಪ್ರಕರಣದ ವಿಶ್ಲೇಷಣೆ ನನ ...
ಕಳೆದ ಕೆಲವು ದಿನಗಳಿಂದ ಟೆಲಿವಿಶನ್ ಉದ್ದಿಮೆಯ ಪ್ರಬಲೀಕರಣ ಕುರಿತ ವಿಷಯ ವಾಣಿಜ್ಯ ಸುದ್ದ ...