ಬೆಳೆಯುವ ಸಿರಿ ಮೊಳಕೆಯಲ್ಲಿ...
mail-img print-img

ಬೆಳೆಯುವ ಸಿರಿ ಮೊಳಕೆಯಲ್ಲಿ...

ಮಂಗಳವಾರ - ಆಗಸ್ಟ್ -31-2010

ಯಾವುದೇ ಕಲೆಗಳು ಸುಲಭವಾಗಿ ಒಗ್ಗುವುದಿಲ್ಲ. ನಿರಂತರ ಪ್ರಯತ್ನ, ಪರಿಶ್ರಮ ಏಕಾಗ್ರತೆಯೇ ಕಲೆಯನ್ನು ಒಲಿಸಿಕೊಳ್ಳುವುದಕ್ಕೆ ಮಂತ್ರ. ಇದು ಒಂದು ಬಗೆಯ ತಪಸ್ಸು ಎಂದರೆ ತಪ್ಪಾಗಲಾರದು. ವಾದ್ಯ ಸಂಗೀತದಲ್ಲಿ ನಿಪುಣನಾಗುತ್ತಿರುವ ಪುತ್ತೂರಿನ ಸುಮನ್ ಆರ್. ದೇವಾಡಿಗ ಉದಯೋನ್ಮುಖ ಕಲಾವಿದನಾಗಿ ಬೆಳೆಯುತ್ತಿದ್ದಾರೆ. ಸುಮನ್ ಪುತ್ತೂರಿನ ಖ್ಯಾತ ಕೊಳಲು ವಾದಕ ಪಿ.ರಾಜರತ್ನಂ ದೇವಾಡಿಗ ಮತ್ತು ಭಾರತಿ ದಂಪತಿಯ ಪುತ್ರ. ಪಾಶ್ಚಾತ್ಯ ಸಂಗೀತ ವಾದ್ಯವಾದ ಸ್ಯಾಕ್ಸೋಫೋನ್‌ಅನ್ನು ಕರ್ನಾಟಕ ಶಾಸ್ತ್ರೀಯ ಲೋಕಕ್ಕೆ ಯಶಸ್ವಿಯಾಗಿ ಅಳವಡಿಸಿದ ದಿ.ವೆಂಕಟಪ್ಪ ಡೋಗ್ರರ ಮೊಮ್ಮಗ.

ಮನೆಯ ಕಲಾ ವಾತಾವರಣದ ನಡುವೆ ಬೆಳೆದ ಸುಮನ್‌ಗೆ ಚಿಕ್ಕಂದಿನಿಂದಲೇ ಕಲೆಯ ಬಗ್ಗೆ ಹೆಚ್ಚು ಆಸಕ್ತಿ. ತನ್ನ ಏಳನೇ ವಯಸ್ಸಿನಿಂದಲೇ ಪುತ್ತೂರಿನ ಖ್ಯಾತ ತಬಲಾ ವಿದ್ವಾಂಸ ಎನ್.ವಿ.ಮೂರ್ತಿಯವರಲ್ಲಿ ತಬಲಾ ಅಭ್ಯಾಸ ಮಾಡುತ್ತಿರುವ ಸುಮನ್, ಕಾರವಾರದ ತಬಲಾ ವಿದ್ವಾಂಸ ಚಂದ್ರಕಾಂತ್ ಗಡ್‌ಕರ್‌ರವರಿಂದಲೂ ವಿಶೇಷ ತರಬೇತಿ ಪಡೆದಿದ್ದಾನೆ. ಜೊತೆಗೆ ಕಳೆದ ಮೂರು ವರ್ಷಗಳಿಂದ ಆಕಾಶವಾಣಿ ಕಲಾವಿದರಾದ ಘಟಂ ವಿದ್ವಾನ್ ತಿರುಚ್ಚಿ ಕೆ.ಆರ್.ಕುಮಾರ್‌ರವರಲ್ಲಿ ಮೃದಂಗ ಕಲಿಯುತ್ತಿದ್ದಾರೆ.

ಕೇಂದ್ರ ಸರಕಾರದ ಸಿ.ಸಿ.ಆರ್.ಟಿ. ಶಿಷ್ಯವೇತನ ಹಾಗೂ ಕರ್ನಾಟಕ ಸರಕಾರದ ಸಂಗೀತ ನಾಟಕ ಅಕಾಡಮಿಯ ಶಿಷ್ಯವೇತನಕ್ಕೂ ಭಾಜನರಾದ ಹಿರಿಮೆ ಸುಮನ್ ರದ್ದು. ಗಾಂಧರ್ವ ಮಹಾ ವಿದ್ಯಾಲಯ ಮೀರಜ್, ಇದರ ವಿದ್ವತ್ ಮಟ್ಟದ ವಿಶಾರದ ಪರೀಕ್ಷೆಯನ್ನು ತನ್ನ 16 ರ ಕಿರಿಯ ವಯಸ್ಸಿನಲ್ಲಿ ಪ್ರಥಮ ಶ್ರೇಣಿಯಲ್ಲಿ ಪಾಸು ಮಾಡಿರುವ ಈತ ಪ್ರಸ್ತುತ ಪುತ್ತೂರಿನ ಸಂತ ಫಿಲೋಮಿನಾ ಕಾಲೇಜಿನ ಅಂತಿಮ ಬಿ.ಎ. ವಿದ್ಯಾರ್ಥಿ.

ತಾಳವಾದ್ಯದಲ್ಲಿ ಹ್ಯಾಟ್ರಿಕ್ ಸಾಧನೆ

ರಾಜ್ಯ ಹಾಗೂ ಜಿಲ್ಲಾ ಮಟ್ಟದ ಹಲವಾರು ವಾದ್ಯ ಸಂಗೀತ ಸ್ಪರ್ಧೆಯಲ್ಲಿ ಬಹುಮಾನ ಪಡೆದಿರುವ ಸುಮನ್ ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಅಂತರ್ ಕಾಲೇಜು ಸಂಗೀತ ಸ್ಪರ್ಧೆಯ ತಾಳವಾದ್ಯ ವಿಭಾಗದಲ್ಲಿ ಸತತವಾಗಿ ಮೂರನೇ ಬಾರಿಗೆ ಗೆಲುವು ಸಾಧಿಸಿ ಹ್ಯಾಟ್ರಿಕ್ ಸಾಧನೆ ಮಾಡಿದ್ದಾರೆ. ಕಲಿಕೆಯ ಜೊತೆ ಜೊತೆಗೆ ಜಿಲ್ಲಾದ್ಯಂತ ಹಲವಾರು ಶಾಸ್ತ್ರೀಯ ಸಂಗೀತ, ಭಾವಗೀತಾ ಕಾರ್ಯಕ್ರಮಗಳಲ್ಲಿ ತಬಲ ವಾದಕರಾಗಿಯೂ ಸಾಥ್ ನೀಡಿದ್ದಾರೆ.

ಸುಮನ್‌ನ ಎಲ್ಲಾ ಕಲಾಚಟುವಟಿಕೆಗೆ ಪ್ರೋತ್ಸಾಹ ನೀಡುತ್ತಿರುವ ಇವನ ಹಂಬಲಕ್ಕೆ ನಿರಂತರ ಬೆಂಬಲ ನೀಡುತ್ತಿರುವ ತಂದೆ ಪಿ.ರಾಜರತ್ನಂ ದೇವಾಡಿಗ ದಂಪತಿ, ಮಗಳು ಮೇಘಾಳ ಕಲಾಸಕ್ತಿಗೂ ಪ್ರೇರಣೆ ನೀಡುತ್ತಿದ್ದಾರೆ. ತಬಲಾ ಹಾಗೂ ಮೃದಂಗದಲ್ಲಿ ಉನ್ನತ ಮಟ್ಟದ ಅಭ್ಯಾಸ ಮಾಡಿ ಒಳ್ಳೆಯ ಕಲಾವಿದ ರಾಗುವ ಆಶಯದೊಂದಿಗೆ ಮುನ್ನಡೆಯುತ್ತಿರುವ ಸುಮನ್‌ರ ಮುಂದಿನ ಕಲಾ ಬದುಕು ಇನ್ನಷ್ಟು ಸುಮಧುರವಾಗಿರಲಿ...

ಮೌನೇಶ್ ವಿಶ್ವಕರ್ಮ

 


Careers Talk
Post Your Comments

  Your Comment **fields are required  
  ಕನ್ನಡದಲ್ಲಿಟೈಪ್ ಮಾಡಲು CTRL + G ಒತ್ತಿರಿ  
 
 
   
   
   



ಸಂಪಾದಕೀಯ

ಮೂರೂ ಬಿಟ್ಟವರು ಊರಿಗೆ ದೊಡ್ಡವರು

ದೇಶದ ಮುಂದೆ ನಾಡು ತಲೆತಗ್ಗಿಸುವಂತಹ ಘಟನೆ ರಾಜ್ಯದ ಸದನದಲ್ಲಿ ನಡೆದಿದೆ. ನಾಡಿನ ಇಬ್ಬರು ಸಚಿವರು ಸದನದಲ್ಲೇ ತಮ್ಮ ಮೊಬೈಲ್ ಮೂಲಕ ಬ್ಲೂಫಿಲಂ ನೋಡಿ, ಜನತೆಯ ಮುಂದೆ ರೆಡ್‌ಹ ...


ನಿಮ್ಮ ಅನಿಸಿಕೆ

postClick here to post your views
EPAPER
access

ಬಡವರ ಮಕ್ಕಳಿಗೆ ನಿರಾಕರಿಸಲ್ಪಟ್ಟ ಶಿಕ್ಷಣ

ಶಿಕ್ಷಣದ ಹಕ್ಕು ನಮ್ಮ ಸಂವಿಧಾನದಲ್ಲಿ ಮೂಲಭೂತ ಹಕ್ಕು ಅಲ್ಲ. ನಮ್ಮ ದೇಶದಲ್ಲಿ ಒಂದು ಲಕ್ಷಕ್ಕೂ ಹ ...


- ಎಸ್.ಬಾಲನ್,ಹೈಕೋರ್ಟ್ ವಕೀಲರು, ಬೆಂಗಳೂರು.

ಯಶಸ್ವಿ ರಂಗ ಪ್ರಯೋಗ ನೀಡುವ ಆತ್ಮೋಲ್ಲಾಸ

ಮುಂಬೈ ಚುಕ್ಕಿ ಸಂಕುಲದ ಗೆಳೆಯರ ಬಳಗ ಪ್ರಸ್ತುತ ಪಡಿಸಿದ ನಾಟಕ ‘ಕುವೆಂಪು ಕಂಡ ಮಂಥರೆ’ ಮುಂಬ ...


- ಗೋಪಾಲ್ ತ್ರಾಸಿ

ಅಂತರ ಜಾತಿಯ ವಿವಾಹ ಮೀಸಲಾತಿಗೆ ಅಡ್ಡಿಯಾಗದು: ಸರ್ವೋಚ್ಚ ನ್ಯಾಯಾಲಯದ ತೀರ್ಪು

ಒಂದಲ್ಲ ಒಂದು ಕಾರಣದಿಂದ ಸಮಾಜದಲ್ಲಿ ಬೇರೂರಿರುವ ಅಸಮಾನತೆಯನ್ನು ಹೋಗಲಾಡಿಸಲು ಕೇಂದ್ರ ಮತ್ತು ರ ...


- ಕೆ. ದೇಜಪ್ಪ

ಆರೆಸ್ಸೆಸ್ ಶಿಸ್ತಿನ ಒಳಗುಟ್ಟು

ಹುಬ್ಬಳ್ಳಿಯಲ್ಲಿ ನಡೆದ ಆರೆಸ್ಸೆಸ್‌ನ ಹಿಂದೂಶಕ್ತಿ ಸಂಗಮ ಕಂಡು ರೋಮಾಂಚಿತಗೊಂಡ ಸ್ನೇಹಿತರ ...


- ಸನತ್‌ ಕುಮಾರ ಬೆಳಗಲಿ

ನಿನ್ನನ್ನು ಒಳ್ಳೆಯ ಬ್ಯಾರಿ ಅಂತ ಹೇಗೆ ನಂಬುವುದು?

‘ಕರಾವಳಿಯಲ್ಲಿ ಒಳ್ಳೆಯ ಬ್ಯಾರಿಗಳೂ ಇದ್ದಾರೆ ಗೊತ್ತುಂಟಾ... ಗೋ ಸಮಾವೇಶ ಮಾಡಿದ ಹಾಗೆ ನಾವು ಮ ...


- ಚೇಳಯ್ಯ

ವಿವೇಕಾನಂದರ ವಾರಸುದಾರರು ಕೋಮುವಾದಿಗಳಲ್ಲ-ಪ್ರಗತಿಪರರು

ಆಧುನಿಕ ತತ್ವಶಾಸದ ಇತಿಹಾಸದಲ್ಲಿ ಸ್ವಾಮಿ ವಿವೇಕಾನಂದರಿಗೆ ಪ್ರಮುಖವಾದ ಸ್ಥಾನವಿದೆ.ವೇದಾಂತ ...


- ಡಾ ಜಿ. ಭಾಸ್ಕರ ಮಯ್ಯ

ಮನಸ್ಸಿನ ಅಸ್ವಸ್ಥತೆಗೆ ಮೂಲ ಕಾರಣ ಹುಡುಕಬೇಕು

ನಾನು ಮನೋವೈದ್ಯೆಯಲ್ಲ.ಆದರೆ ಮನಸ್ಸನ್ನು ಪ್ರೀತಿಸುವುದರಿಂದ ಮಾತ್ರ ಈ ಪ್ರಕರಣದ ವಿಶ್ಲೇಷಣೆ ನನ ...


- ಜ್ಯೋತಿ ಗುರುಪ್ರಸಾದ್

ದೂರಸಂಪರ್ಕ ನೀತಿ ಬೇಕಾಗಿದೆ

ಕಳೆದ ಕೆಲವು ದಿನಗಳಿಂದ ಟೆಲಿವಿಶನ್ ಉದ್ದಿಮೆಯ ಪ್ರಬಲೀಕರಣ ಕುರಿತ ವಿಷಯ ವಾಣಿಜ್ಯ ಸುದ್ದ ...


- ಅರವಿಂದ ರಾಜಗೋಪಾಲ