ಬೆಂಗಳೂರು, ಸೆ. 3: ಹಾಸನ ವೈದ್ಯ ಕೀಯ ಕಾಲೇಜು ನೇಮಕಾತಿ ಅವ್ಯವ ಹಾರದಲ್ಲಿ ವೈದ್ಯಕೀಯ ಸಚಿವ ಮತ್ತು ಪುತ್ರ ಭಾಗಿಯಾಗಿದ್ದಾರೆ ಎಂಬ ಆರೋ ಪದ ಕುರಿತು ಪ್ರತಿಕ್ರಿಯಿಸಿರುವ ಸಚಿವ ರಾಮಚಂದ್ರಗೌಡ, ‘ನಾನು ಕುರಿ, ನನ್ನ ಮಗ ಕುರಿ ಮರಿ. ನಮ್ಮನ್ನು ತೋಳಗಳು ಭೇಟೆಯಾಡಲು ಮುಂದಾಗಿದೆ’ ಎಂದು ಪರೋಕ್ಷವಾಗಿ ಜೆಡಿಎಸ್ ಮುಖಂಡ ಎಚ್.ಡಿ.ರೇವಣ್ಣ ವಿರುದ್ಧ ಗುಡುಗಿದ್ದಾರೆ.
ಹಾಸನದ ಸರಕಾರಿ ವೈದ್ಯಕೀಯ ಕಾಲೇಜಿನಲ್ಲಿ ನೇಮಕಾತಿ ಸಂದರ್ಭದಲ್ಲಿ ನಡೆದಿರುವ ಅವ್ಯವಹಾರದ ಕುರಿತು ನಿನ್ನೆ ಎಚ್.ಡಿ.ರೇವಣ್ಣ, ಉದ್ಯೋಗ ವಂಚಿ ರೊಂದಿಗೆ ಸೇರಿಕೊಂಡು ಸುದ್ದಿಗೋಷ್ಠಿ ನಡೆಸಿ, ವೈದ್ಯಕೀಯ ಸಚಿವ ರಾಮಚಂದ್ರ ಗೌಡರ ಮತ್ತು ಅವರ ಪುತ್ರನ ವಿರುದ್ಧ ಬಾಂಬ್ ಒಂದನ್ನು ಸಿಡಿಸಿದ್ದರು.
ಇದರಿಂದ ಸಿಡಿಮಿಡಿಗೊಂಡಿರುವ ರಾಮಚಂದ್ರ ಗೌಡ, ರೇವಣ್ಣ ಮತ್ತಿತರರು ತೋಳ ಗಳಂತೆ ನಮ್ಮ ಮೇಲೆ ವಿನಾ ಕಾರಣ ಮುಗಿಬೀಳುತ್ತಿದ್ದಾರೆ ಎಂದು ಆರೋಪಿಸಿದರು.
ಶುಕ್ರವಾರ ನಗರದ ಅರಮನೆ ಮೈದಾನದಲ್ಲಿ ನಡೆದ ಭಾರತದ ಬೃಹತ್ ಆಹಾರ ತಾಂತ್ರಿಕ ಮೇಳ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದರು.
ಅವ್ಯವಹಾರ ನ್ಯಾಯಾಲಯದ ಆವರಣದಲ್ಲಿರುವುದರಿಂದ ಇದರ ಕುರಿತು ಇನ್ನೇ ನನ್ನು ಹೇಳಲು ಬಯಸುವುದಿಲ್ಲ ಎಂದ ಅವರು, ನೇಮಕಾತಿಯಲ್ಲಿ ಯಾವುದೇ ರೀತಿಯ ಅವ್ಯವಹಾರ ನಡೆದಿಲ್ಲ ಎಂದು ಹೇಳಿದರು.
ಈ ಅವ್ಯವಹಾರ ಆರೋಪದ ಕುರಿತು ಮುಖ್ಯಮಂತ್ರಿ ನೇಮಕ ಮಾಡಿರುವ ತನಿಖಾಧಿಕಾರಿಗಳಿಗೆ ತಮ್ಮ ಇಲಾಖೆಯ ಅಧಿಕಾರಿಗಳು ಎಲ್ಲ ರೀತಿಯಿಂದಲೂ ಸಂಪೂರ್ಣ ಸಹಕಾರ ನೀಡುತ್ತಿದ್ದಾರೆ. ನೇಮಕಾತಿಯಲ್ಲಿ ಕೇಳಿ ಬರುತ್ತಿರುವ ಆರೋಪಗಳು ನಿರಾಧಾರ ಎಂದು ಹೇಳಿದರು.
ಈ ನಾಡಿನ ಆತ್ಮ ಸಾಕ್ಷಿಯನ್ನು ಕಲಕುವಂತಹ ಮೂರು ಘಟನೆಗಳು ನಮ್ಮ ಮುಂದೆಯೇ ನಡೆದು ಹೋಗಿದೆ.ಆದರೆ ಅದಕ್ಕೆ ಸ್ಪಂದಿಸುವಂತಹ ಸಂವೇದನೆಗಳನ್ನು ಮಾತ್ರ ನಾಡು ಕಳೆದುಕ ...
Click here to post your views ಶತಮಾನಗಳಿಂದ ಕಾಡಿನಲ್ಲಿ ನೆಲೆಸಿರುವ ಆದಿವಾಸಿಗಳು ಹಕ್ಕುಪತ್ರ ಮತ್ತು ಸಾಗುವಳಿ ಚೀಟಿ ಕೇಳಿದರ ...
ಈ ಇಂಡಿಯಾಕ್ಕೆ ಸಂವಿಧಾನ ಕೊಟ್ಟ ಮಹಾನ್ ನಾಯಕರ ಆ ವ್ಯಂಗ್ಯ ಚಿತ್ರ ಬಂದಾಗ ಅದನ್ನ ...
ಎಸೆಸೆಲ್ಸಿ ಫಲಿತಾಂಶ ಪ್ರಕಟವಾಗಿ ತೇರ್ಗಡೆಯಾದ ಮಕ್ಕಳು ಸಂಭ್ರಮಿಸುತ್ತಿರುವ ಈ ಸಂದರ್ಭದಲ್ಲ ...
ನಾವು ಬೆಳಗಾಂನಿಂದ ಅವ್ಯಕ್ತ ಭಾವನೆಗಳನ್ನು ತುಂಬಿಕೊಂಡು ಹುಬ್ಬಳ್ಳಿ ಮತ್ತು ಧಾರವಾಡಕ್ಕೆ ಹೊರಟೆವ ...
ಭಾರತ ಕಂಡ ಅತ್ಯಂತ ಸಂವೇದನಾಶೀಲ ಮತ್ತು ಪ್ರತಿಭಾವಂತ ವ್ಯಂಗ್ಯಚಿತ್ರಕಾರ ಶಂಕರ್ ಅವರು 1949ರಲ ...
ಮೊದಲಿಗೆ ಅಯ್ಯಂಗಾರ್ ಗೋಳ್ವಾಲ್ಕರ್ಗೆ ಈ ಕೆಳಗಿನ ಅಂಶಗಳತ್ತ ಬೆಟ್ಟು ಮಾಡಿದರು:ಮೊದಲನೆಯದು, ಶ ...
ಭೇಟಿಯನ್ನು ವರದಿ ಮಾಡುವುದಕ್ಕಾಗಿ ನಾಗಪುರದಿಂದ ಹೋಗಿದ್ದ ಪೊಲೀಸ್ ಅಧಿಕಾರಿಯ ಮೇಲೆ ಮಿಶ ...
ಭಾರತೀಯ ಸಂವಿಧಾನವನ್ನು ಟೀಕಿಸಿದ ಗೋಳ್ವಾಲ್ಕರ್, ಓರ್ವ ಸಾಮಾನ್ಯ ವ್ಯಕ್ತಿ ಅರ್ಥ ಮಾಡ ...