ರಾಷ್ಟ್ರದ ಪ್ರತಿಯೊಬ್ಬರಿಗೂ ಪ್ರಜಾಪ್ರಭುತ್ವದ ಬಯಕೆ: ಗೀಲಾನಿ
mail-img print-img

ರಾಷ್ಟ್ರದ ಪ್ರತಿಯೊಬ್ಬರಿಗೂ ಪ್ರಜಾಪ್ರಭುತ್ವದ ಬಯಕೆ: ಗೀಲಾನಿ

ಶನಿವಾರ - ಜನವರಿ -28-2012

ಇಸ್ಲಾಮಾಬಾದ್, ಜ.27: ಪಾಕಿಸ್ತಾನದಲ್ಲಿ ಪ್ರತಿಯೊಬ್ಬರೂ ಪ್ರಜಾಪ್ರಭುತ್ವವನ್ನು ಬಯಸುತ್ತಾರೆ ಹಾಗೂ ಯಾರೊಬ್ಬರಿಗೂ ಸಂವಿಧಾನವನ್ನು ಉಲ್ಲಂಘಿಸುವ ಇಚ್ಛೆಯಿಲ್ಲ ಎಂದು ಪಾಕ್ ಪ್ರಧಾನಿ ಯೂಸುಫ್ ರಝಾ ಗೀಲಾನಿ ಹೇಳಿದ್ದಾರೆ.
ಸ್ವಿಝರ್‌ಲೆಂಡ್‌ನ ದಾವೊಸ್‌ನಲ್ಲಿ ನಡೆಯುತ್ತಿರುವ ವಿಶ್ವ ಆರ್ಥಿಕ ವೇದಿಕೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಗೀಲಾನಿ ಈ ಅಭಿಪ್ರಾಯ ವ್ಯಕ್ತಪಡಿಸಿದ್ದು, ಸರಕಾರದ ಯಾವುದೇ ಸಂಸ್ಥೆಗಳ ನಡುವೆ ವಿವಾದಗಳು ನಡೆಯುತ್ತಿಲ್ಲ ಎಂದು ತಿಳಿಸಿದ್ದಾರೆ.

ದಾವೊಸ್‌ಗೆ ಆಗಮಿಸುವ ಮುನ್ನ ಪಾಕ್ ಸೇನಾ ಮುಖ್ಯಸ್ಥ ಜನರಲ್ ಅಶ್ಫಾಕ್ ಪರ್ವೇರ್ಝ ಕಯಾನಿ ಹಾಗೂ ಐಎಸ್‌ಐ ಮುಖ್ಯಸ್ಥ ಅಹ್ಮದ್ ಶುಜಾ ಪಾಷಾರೊಂದಿಗೆ ನಡೆದ ಮಾತುಕತೆಯ ಬಗ್ಗೆ ಸುದ್ದಿಗಾರರಿಗೆ ವಿವರ ನೀಡಿದ್ದ ಪ್ರಧಾನಿ, ಅಫ್ಘಾನಿಸ್ತಾನದ ಭದ್ರತಾ ವಿಷಯಗಳಿಗೆ ಸಂಬಂಧಿಸಿಯೂ ಚರ್ಚೆ ನಡೆಸಲಾಗಿದೆ ಎಂದಿದ್ದಾರೆ.

ಪಾಕಿಸ್ತಾನದ ಅಬೊತಾಬಾದ್‌ನಲ್ಲಿ ಅಡಗಿದ್ದ ಅಲ್ ಖಾಯಿದ ಅಧಿನಾಯಕ ಉಸಾಮ ಬಿನ್ ಲಾದೆನ್‌ನನ್ನು ಅಮೆರಿಕದ ಸೀಲ್ ಕಮಾಂಡೊ ಪಡೆ 2011ರ ಮೇ ಎರಡರಂದು ಹತ್ಯೆಗೈದ ಬಳಿಕ ರಾಷ್ಟ್ರದಲ್ಲಿ ಸೇನಾ ಕ್ರಾಂತಿ ಸಂಭವಿಸಬಹುದು ಎಂದು ಆತಂಕಗೊಂಡಿದ್ದ ಅಧ್ಯಕ್ಷ ಆಸಿಫ್ ಅಲಿ ಝರ್ದಾರಿ ನೆರವು ಕೋರಿ ಅಮೆರಿಕಕ್ಕೆ ಪತ್ರವೊಂದನ್ನು ಬರೆದಿರುವುದನ್ನು ಪಾಕ್ ಮೂಲದ ಅಮೆರಿಕನ್ ಉದ್ಯಮಿ ಮನ್ಸೂರ್ ಇಜಾಝ್ ಬಹಿರಂಗಪಡಿಸಿದ ಬಳಿಕ ಸರಕಾರ ಹಾಗೂ ಸೇನೆಯ ನಡುವೆ ತೀವ್ರ ಮುಸುಕಿನ ಗುದ್ದಾಟ ಪ್ರಾರಂಭವಾಗಿತ್ತು.

ನಾಗರಿಕ ಸಮಾಜ, ಬೇಹುಗಾರಿಕೆ, ಮಾಧ್ಯಮಗಳು, ಸಂಸದರು ಎಲ್ಲರೂ ರಾಷ್ಟ್ರದಲ್ಲಿ ಪ್ರಜಾಪ್ರಭುತ್ವವನ್ನು ಬಯಸುತ್ತಾರೆ ಎಂದು ಗೀಲಾನಿ ನುಡಿದಿದ್ಧಾರೆ. ‘‘ಪ್ರಜಾಪ್ರಭುತ್ವಕ್ಕೆ ಹೊರತಾದ ಇನ್ನಿತರ ಯಾವುದೇ ವಿಚಾರದ ಬಗ್ಗೆ ಯಾರಿಗೂ ಒಲವಿಲ್ಲ. ಪ್ರಜಾಪ್ರಭುತ್ವವು ಬಲಿಷ್ಠವಾಗಿದೆ ಹಾಗೂ ಅಖಂಡವಾಗಿದೆ.’’ ಎಂದವರು ಹೇಳಿದ್ದಾರೆ.

Careers Talk
Post Your Comments

  Your Comment **fields are required  
  ಕನ್ನಡದಲ್ಲಿಟೈಪ್ ಮಾಡಲು CTRL + G ಒತ್ತಿರಿ  
 
 
   
   
   



ಸಂಪಾದಕೀಯ

ಶಿಲಾಯುಗದ ಸಂಸ್ಕೃತಿ

ಈ ನಾಡಿನ ಆತ್ಮ ಸಾಕ್ಷಿಯನ್ನು ಕಲಕುವಂತಹ ಮೂರು ಘಟನೆಗಳು ನಮ್ಮ ಮುಂದೆಯೇ ನಡೆದು ಹೋಗಿದೆ.ಆದರೆ ಅದಕ್ಕೆ ಸ್ಪಂದಿಸುವಂತಹ ಸಂವೇದನೆಗಳನ್ನು ಮಾತ್ರ ನಾಡು ಕಳೆದುಕ ...


ನಿಮ್ಮ ಅನಿಸಿಕೆ

postClick here to post your views
EPAPER
access

ಪ್ರಜೆಗಳ ಕೊರಳು ಹಿಸುಕುವ ಪ್ರಭುತ್ವ

ಶತಮಾನಗಳಿಂದ ಕಾಡಿನಲ್ಲಿ ನೆಲೆಸಿರುವ ಆದಿವಾಸಿಗಳು ಹಕ್ಕುಪತ್ರ ಮತ್ತು ಸಾಗುವಳಿ ಚೀಟಿ ಕೇಳಿದರ ...


- ಸನತ್‌ಕುಮಾರ ಬೆಳಗಲಿ

ವ್ಯಂಗ್ಯಚಿತ್ರ ನಿಷೇಧದ ಕುರಿತು ಪ್ರಗತಿಪರರ ನಿಲುವಿಗೆ ಒಂದು ಪ್ರತಿಕ್ರಿಯೆ

ಈ  ಇಂಡಿಯಾಕ್ಕೆ ಸಂವಿಧಾನ ಕೊಟ್ಟ ಮಹಾನ್ ನಾಯಕರ ಆ ವ್ಯಂಗ್ಯ ಚಿತ್ರ ಬಂದಾಗ ಅದನ್ನ ...


- ಮಹಾದೇವ ಹಡಪದ

ಅಂಕಪಟ್ಟಿ ಜೀವನಕ್ಕೆ ಅಂಕದ ಪರದೆ ಎಳೆಯದಿರಲಿ

ಎಸೆಸೆಲ್ಸಿ ಫಲಿತಾಂಶ ಪ್ರಕಟವಾಗಿ ತೇರ್ಗಡೆಯಾದ ಮಕ್ಕಳು ಸಂಭ್ರಮಿಸುತ್ತಿರುವ ಈ ಸಂದರ್ಭದಲ್ಲ ...


- ಜ್ಯೋತಿ ಗುರುಪ್ರಸಾದ್

ಆ ಹುಡುಗಿಯರಲ್ಲಿ ತಾಯ್ತನದ ಹೆಚ್ಚುಗಾರಿಕೆ

ನಾವು ಬೆಳಗಾಂನಿಂದ ಅವ್ಯಕ್ತ ಭಾವನೆಗಳನ್ನು ತುಂಬಿಕೊಂಡು ಹುಬ್ಬಳ್ಳಿ ಮತ್ತು ಧಾರವಾಡಕ್ಕೆ ಹೊರಟೆವ ...


- ಶೂದ್ರ ಶ್ರೀನಿವಾಸ್

ವ್ಯಂಗ್ಯವಿರುವುದು ಇಂದಿನ ಸಂದರ್ಭದಲ್ಲಿ..;ಭಾಗ-1

ಭಾರತ ಕಂಡ ಅತ್ಯಂತ ಸಂವೇದನಾಶೀಲ ಮತ್ತು ಪ್ರತಿಭಾವಂತ ವ್ಯಂಗ್ಯಚಿತ್ರಕಾರ ಶಂಕರ್ ಅವರು 1949ರಲ ...


- ಶಿವಸುಂದರ್

ಆರೆಸ್ಸೆಸ್ ಮೇಲಿನ ನಿಷೇಧ ಹೇಗೆ ತೆರವಾಯಿತು? ;ಭಾಗ-7

ಮೊದಲಿಗೆ ಅಯ್ಯಂಗಾರ್ ಗೋಳ್ವಾಲ್ಕರ್‌ಗೆ ಈ ಕೆಳಗಿನ ಅಂಶಗಳತ್ತ ಬೆಟ್ಟು ಮಾಡಿದರು:ಮೊದಲನೆಯದು, ಶ ...


- ರಾಕೇಶ್ ಅಂಕಿತ್

ಆರೆಸ್ಸೆಸ್ ಮೇಲಿನ ನಿಷೇಧ ಹೇಗೆ ತೆರವಾಯಿತು? ಭಾಗ-6

ಭೇಟಿಯನ್ನು ವರದಿ ಮಾಡುವುದಕ್ಕಾಗಿ ನಾಗಪುರದಿಂದ ಹೋಗಿದ್ದ ಪೊಲೀಸ್ ಅಧಿಕಾರಿಯ ಮೇಲೆ ಮಿಶ ...


- ರಾಕೇಶ್ ಅಂಕಿತ್

ಆರೆಸ್ಸೆಸ್ ಮೇಲಿನ ನಿಷೇಧ ಹೇಗೆ ತೆರವಾಯಿತು? ಭಾಗ-5

ಭಾರತೀಯ ಸಂವಿಧಾನವನ್ನು ಟೀಕಿಸಿದ ಗೋಳ್ವಾಲ್ಕರ್, ಓರ್ವ ಸಾಮಾನ್ಯ ವ್ಯಕ್ತಿ ಅರ್ಥ ಮಾಡ ...


- ರಾಕೇಶ್ ಅಂಕಿತ್