
ಕೋಮು ಹಿಂಸಾಚಾರ ಷಡ್ಯಂತ್ರದ ವಿರುದ್ಧ ಯುವ ಕಾಂಗ್ರೆಸ್ ಪ್ರತಿಭಟನೆ
ಬಂಟ್ವಾಳ, ಜ.27: ಉಪ್ಪಿನಂಗಡಿಯಲ್ಲಿ ಪ್ರಚೋದನಕಾರಿ ಭಾಷಣ ಮಾಡಿರುವ ಕಲ್ಲಡ್ಕ ಪ್ರಭಾಕರ ಭಟ್ರನ್ನು ಪೊಲೀಸರು 10 ದಿನಗಳ ಒಳಗಾಗಿ ಬಂಧಿಸಬೇಕು ಹಾಗೂ ಪೊಲೀಸರ ಬೆಂಗಾವಲು ಪಡೆಯನ್ನು ದುರುಪಯೋಗಪಡಿಸಿ ಕೊಂಡು ಸಮಾಜ ಒಡೆಯುವ ಕೆಲಸ ಮಾಡುತ್ತಿರುವ ಭಟ್ರ ಬೆಂಗಾವಲು ಪಡೆಯನ್ನು ತಕ್ಷಣ ಹಿಂದೆಗೆದುಕೊಳ್ಳಬೇಕು ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ, ಬಂಟ್ವಾಳ ಶಾಸಕ ಬಿ.ರಮಾನಾಥ ರೈ ಒತ್ತಾಯಿಸಿದ್ದಾರೆ.
| ಹಿಂದೂ ಸಮಾಜವನ್ನು ಭಟ್ಟರು ಗುತ್ತಿಗೆ ತೆಗೆದುಕೊಂಡಿಲ್ಲ: ಭರತ್ ಮುಂಡೋಡಿ ರಮಾನಾಥ ರೈಯಂಥ ಜಾತ್ಯತೀತ ನಾಯಕರಿರುವ ಊರಿಗೆ ನಾನು ಭಾಷಣ ಮಾಡಲು ಬರಬೇಕೆಂದಿಲ್ಲ, ಆದರೆ ಓರ್ವ ಹಿಂದೂವಾಗಿ ಇಲ್ಲಿಗೆ ಬಂದಿದ್ದೇನೆ. ಹಿಂದೂ ಸಮಾಜವನ್ನು ಕಲ್ಲಡ್ಕ ಪ್ರಭಾಕರ ಭಟ್ಟರಿಗೆ ಗುತ್ತಿಗೆ ನೀಡಿಲ್ಲ ಎಂಬುದನ್ನು ತಿಳಿಸಲು ನಾನು ಇಲ್ಲಿಗೆ ಬರಬೇಕಾಯಿತು. ಅವರು ವಯಸ್ಸಿನಲ್ಲಿ ಹಿರಿಯರಾದರೂ, ಅವರ ಯೋಗ್ಯತೆ ಅವರನ್ನು ಏಕವಚನದಲ್ಲಿ ಕರೆಯುವಂತೆ ಮಾಡಿದೆ ಎಂದು ಟೀಕಿಸಿದ ಸುಳ್ಯದ ಕಾಂಗ್ರೆಸ್ ಮುಖಂಡ ಭರತ್ ಮುಂಡೋಡಿ, ಸಮಾಜದಲ್ಲಿ ಅಶಾಂತಿ ಉಂಟುಮಾಡುವ ದೇಶದ್ರೋಹಿಗಳ ವಿರುದ್ಧ ಜಾಗೃತರಾಗುವಂತೆ ಕರೆ ನೀಡಿದರು. |
ಬಂಟ್ವಾಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಯುವ ಕಾಂಗ್ರೆಸ್ ವತಿಯಿಂದ ಶುಕ್ರವಾರ ಬಿ.ಸಿ.ರೋಡಿನ ತಾಲೂಕು ಕಚೇರಿ ಮುಂಭಾಗ ದಲ್ಲಿ ಹಮ್ಮಿಕೊಂಡಿದ್ದ ಸಾಮಾಜಿಕ ಸ್ವಾಸ್ಥ್ಯ ಕೆಡಿಸುವ ದೇಶದ್ರೋಹಿಗಳ ವಿರುದ್ಧದ ಬೃಹತ್ ಪ್ರತಿಭಟನೆ ಯಲ್ಲಿ ಅವರು ಮಾತನಾಡಿದರು.
ಪ್ರಭಾಕರ ಭಟ್ಟರ ಭಾಷಣವನ್ನು ಸಮರ್ಥಿಸಿದ ಜಿಲ್ಲಾ ಉಸ್ತುವಾರಿ ಸಚಿವರನ್ನು ಪ್ರಭಾಕರ ಭಟ್ಟರ ಪಿಎ ಎಂದು ವ್ಯಂಗ್ಯವಾಡಿದ ರೈ, ಒಬ್ಬ ವ್ಯಕ್ತಿಯ ಗುಲಾಮನಾಗಿರುವವ ಸಚಿವ ಸ್ಥಾನದಲ್ಲಿ ಮುಂದು ವರಿಯಲು ಅಸಮರ್ಥನಾಗಿದ್ದು, ಕೂಡಲೆ ಅವರು ರಾಜೀನಾಮೆ ನೀಡಲಿ ಎಂದು ಆಗ್ರಹಿಸಿದರು.
ಮಂಗಳೂರು ಶಾಸಕ ಯು.ಟಿ.ಖಾದರ್ ಮಾತನಾಡಿ, ರಾಜಕೀಯ ದುರುದ್ದೇಶದಿಂದ ಸಾಮಾಜಿಕ ಏಕತೆಗೆ ಭಂಗ ಉಂಟು ಮಾಡುತ್ತಿರುವ ದೇಶ ದ್ರೋಹಿಗಳ ವಿರುದ್ಧ ಪ್ರಜ್ಞಾವಂತರು ಜಾಗೃತರಾಗಿ, ತಕ್ಕ ಪಾಠ ಕಲಿಸಬೇಕಾದ ಕಾಲ ಕೂಡಿ ಬಂದಿದೆ. ಸಂವಿಧಾನದ ವಾಕ್ ಸ್ವಾತಂತ್ರ್ಯವನ್ನು ದುರುಪಯೋಗ ಪಡಿಸಿಕೊಳ್ಳುವ ಮಂದಿ ದೇಶಕ್ಕಾಗಿ ಒಳ್ಳೆಯದನ್ನು ಮಾತನಾಡುವ ಹವ್ಯಾಸವನ್ನು ರೂಢಿಸಿಕೊಳ್ಳಲಿ ಎಂದರು.
ಜಿಲ್ಲಾ ಯುವ ಕಾಂಗ್ರೆಸ್ ಮಾಜಿ ಅಧ್ಯಕ್ಷ ಬೊಂಡಾಲ ಜಗನ್ನಾಥ ಶೆಟ್ಟಿ ಮಾತನಾಡಿ, ಪ್ರಭಾಕರ ಭಟ್ಟರ ವಿರುದ್ಧ ಪ್ರಕರಣ ದಾಖಲಿಸಿಕೊಂಡ ಪೊಲೀಸರಿಗೆ ಅಭಿನಂದನೆ ಯನ್ನು ಸಲ್ಲಿಸಿದರಲ್ಲದೆ, ತಕ್ಷಣ ಬಂಧನ ಪ್ರಕ್ರಿಯೆ ಯನ್ನೂ ನಡೆಸುವಂತೆ ಒತ್ತಾಯಿಸಿದರು. ಕಾಂಗ್ರೆಸ್ ಮುಖಂಡ ಅಶ್ವನಿಕುಮಾರ್ ರೈ ಮಾತನಾಡಿ, ಧರ್ಮದ ರಕ್ಷಕರೆಂದು ಕರೆಸಿ ಕೊಳ್ಳುವ ಸ್ವಾಮೀಜಿಗಳು ಏಕತೆಯನ್ನು ಮುರಿ ಯುವ ಕೆಲಸ ಮಾಡದೆ, ತಮ್ಮ ನಡೆನುಡಿಯ ಬಗ್ಗೆ ಆತ್ಮ ವಿಮರ್ಶೆ ಮಾಡಿಕೊಳ್ಳಬೇಕಾಗಿದೆ ಎಂದರು.
ಕಾಂಗ್ರೆಸ್ ಮುಖಂಡ ಹರಿಕೃಷ್ಣ ಬಂಟ್ವಾಳ ಮಾತನಾಡಿ, ಉಪ್ಪಿನಂಗಡಿಯಲ್ಲಿ ನಡೆದಿರುವುದು ಹಿಂದೂ ಸಮಾಜೋತ್ಸವವಲ್ಲ, ಅದು ಭಟ್ಟರ ಸಮಾಜೋತ್ಸವ ಎಂದು ಟೀಕಿಸಿದರು. ಮುಸ್ಲಿಮ್ ಹಾಗೂ ಕ್ರಿಶ್ಚಿಯನ್ನರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡುವ ಪ್ರಭಾಕರ ಭಟ್ಟರ ಕಾರಿಗೆ, ಮುಸ್ಲಿಮ್ ದೇಶದ ಪೆಟ್ರೋಲೇ ಬೇಕು ಎಂಬುದನ್ನು ತಿಳಿದುಕೊಳ್ಳಲಿ ಎಂದರು.
ಜಿ.ಪಂ. ಸದಸ್ಯ ಪ್ರಕಾಶ್ ಶೆಟ್ಟಿ ಮಾತನಾಡಿ, ಚುನಾವಣೆ ಬಂದಾಗ ಮಾತ್ರ ಹಿಂದೂಗಳ ಬಗ್ಗೆ ಮಾತನಾಡುವ ಪ್ರಭಾಕರ ಭಟ್ಟರ ಡೋಂಗಿ ಹಿಂದುತ್ವಕ್ಕೆ ಯಾರೂ ಬಲಿಯಾಗಬಾರದು ಎಂದರು. ಮಹಿಳಾ ಕಾಂಗ್ರೆಸ್ನ ಮಮತಾಗಟ್ಟಿ ಮಾತನಾಡಿ, ಹಿಂದೂ ಮಹಿಳೆಯರು ಸೇರಿದಂತೆ ಸಮಾಜದ ಎಲ್ಲ ಸಮುದಾಯದ ಮಹಿಳಾ ವರ್ಗಕ್ಕೆ ಅವಮಾನವಾಗುವಂತಹ ರೀತಿಯಲ್ಲಿ ಕಲ್ಲಡ್ಕದ ಗಣ್ಯ ವ್ಯಕ್ತಿ ಮಾತನಾಡಿರುವುದು ಖಂಡನೀಯ ಎಂದರು.
ಜಿ.ಪಂ. ಸದಸ್ಯ ಎಂ.ಎಸ್.ಮುಹಮ್ಮದ್, ಕಾಂಗ್ರೆಸ್ನ ಜಿಲ್ಲಾ ಪರಿಶಿಷ್ಟ ಜಾತಿ ಮತ್ತು ಪಂಗಡ ವಿಭಾಗದ ಅಧ್ಯಕ್ಷ ಪದ್ಮನಾಭ ನರಿಂಗಾನ, ಮಾಜಿ ಜಿ.ಪಂ. ಸದಸ್ಯ ಶಾಹುಲ್ ಹಮೀದ್ ಮೊದಲಾದವರು ಮಾತನಾಡಿ ಸಾಮಾಜಿಕವಾಗಿ ಶಾಂತಿ ಕಾಯ್ದುಕೊಳ್ಳುವಂತೆ ಕರೆ ನೀಡಿದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಅಬ್ಬಾಸ್ ಅಲಿ, ಮಾಯಿಲಪ್ಪ ಸಾಲ್ಯಾನ್, ಪ್ರಕಾಶ್ಚಂದ್ರ ಆಳ್ವ, ಬಂಟ್ವಾಳ ಯುವ ಕಾಂಗ್ರೆಸ್ನ ಅಧ್ಯಕ್ಷ ವಿಶ್ವನಾಥ ಗೌಡ ಮಣಿ, ಪಕ್ಷದ ಪ್ರಮುಖರಾದ ಸುದರ್ಶನ್ ಜೈನ್, ಎ.ಸಿ.ಭಂಡಾರಿ, ಪದ್ಮಶೇಖರ್ ಜೈನ್, ಉಮರ್ ಫಾರೂಕ್, ಸದಾಶಿವ ಬಂಗೇರ, ರೋಶನ್, ಅಬ್ದುರ್ರಝಾಕ್ ಕುಕ್ಕಾಜೆ, ಪುರಸಭಾ ಸದಸ್ಯರಾದ ರಿಯಾಝ್ ಹುಸೈನ್, ಮುಹಮ್ಮದ್ ಶರೀಫ್, ಮುಹಮ್ಮದ್ ನಂದರಬೆಟ್ಟು, ಕಾಂಗ್ರೆಸ್ ಬೆಂಬಲಿತ ತಾ.ಪಂ. ಸದಸ್ಯರು ಸೇರಿದಂತೆ ನೂರಾರು ಮಂದಿ ಪ್ರತಿಭಟನೆಯಲ್ಲಿ ಪಾಲ್ಗೊಂಡರು.
ಆರಂಭದಲ್ಲಿ ಕೈಕಂಬ ಪೊಳಲಿ ದ್ವಾರದ ಬಳಿಯಿಂದ ಬಿ.ಸಿ.ರೋಡ್ ತಾಲೂಕು ಕಚೇರಿಯವರೆಗೆ ಕಾಂಗ್ರೆಸ್ ಕಾರ್ಯಕರ್ತರ ಬೃಹತ್ ಪ್ರತಿಭಟನಾ ಜಾಥಾ ನಡೆಯಿತು.
ನಮ್ಮ ಶಿಕ್ಷಣ ವ್ಯವಸ್ಥೆಯ ರುದ್ರ ರೂಪವೊಂದು ಹರ್ಯಾಣದ ಅನ್ವಾಂಟ್ ಶಾಲೆಯೊಂದರಲ್ಲಿ ಪ್ರಕಟವಾಗಿದೆ.ಹೋಮ್ ವರ್ಕ್ ಮಾಡದ ಒಂದೇ ಒಂದು ಕಾರಣಕ್ಕಾಗಿ ಎಲ್ಕೆಜಿ ವಿದ್ಯ ...
Click here to post your views ಸಾಮ್ರಾಜ್ಯವಾದಿ ದೇಶಗಳಾದ ಅಮೆರಿಕ, ಇಂಗ್ಲೆಂಡ್, ಜರ್ಮನಿ, ಜಪಾನ್... ದೇಶಗಳು ಇಂದು ತೀವ್ರ ಆರ್ಥಿಕ ...
ಅಣ್ಣಾ ಹಝಾರೆಯ ಭ್ರಷ್ಟಾಚಾರ ವಿರೋಧಿ ಆಂದೋಲನಕ್ಕೆ ಆರೆಸ್ಸೆಸ್ ಬೆಂಬಲ ನೀಡಿತ್ತು ಎಂದು ಕಳ ...
ನವ ಉದಾರೀಕರಣದ ದುರಾಕ್ರಮಣದ ಈ ಕಾಲದಲ್ಲಿ ಕೋಮುವಾದ ನಾನಾ ವೇಷಧರಿಸಿ ವಕ್ಕರಿಸುತ್ತಿರುವ ಆತಂಕದ ...
ಚಿಕ್ಕಮಗಳೂರು-ಉಡುಪಿ ಕ್ಷೇತ್ರಕ್ಕೆ ಚುನಾವಣೆ ಘೋಷಣೆ ಯಾದುದೇ ಬಿಜೆಪಿ, ಅರ್ಹ ಅಭ್ಯರ್ಥಿಯನ್ನು ಹ ...
‘ಸತ್ಯಂ ಶಿವಂ ಸುಂದರಂ...’ ಎಂಬ ಹಿಂದಿ ಸಿನಿಮಾದ ಈ ಶೀರ್ಷಿಕೆಯ ಹಾಡನ್ನು ಮತ್ತೆ ಮತ್ತೆ ಹಾಡಿಕ ...
ಇತ್ತೀಚೆಗೆ ಎಲ್ಲೆಂದರಲ್ಲಿ ಒಂದು ಬೇಡಿಕೆ ಸಹಜ ವೆಂಬತೆ ಎದ್ದಿದೆ. ಅದು ಸಚಿನ್ತೆಂಡೂಲ್ಕರ್ಗೆ ಭಾರತ ರತ ...
ಕಳೆದ ಸಂಚಿಕೆಯಲ್ಲಿ ಗಮನಿಸಿದಂತೆ ಪ್ರಾಥಮಿಕ ಶಿಕ್ಷಣದಲ್ಲಿ ಸೌಹಾರ್ದ ಬದುಕು ಮತ್ತು ವೈಜ್ಞ ...
ಕಳೆದ ಸಂಚಿಕೆಯಲ್ಲಿ ಗಮನಿಸಿದಂತೆ ಪ್ರಾಥಮಿಕ ಶಿಕ್ಷಣದಲ್ಲಿ ಸೌಹಾರ್ದ ಬದುಕು ಮತ್ತು ವೈಜ್ಞ ...