ಧಾರವಾಡ, ಸೆ. 3: ಇತಿಹಾಸ ತಜ್ಞರು ಮತ್ತು ಸಾರ್ವ ಜನಿಕರಲ್ಲಿ ತೀವ್ರ ಕುತೂಹಲ ಕೆರಳಿಸಿದ್ದ ಜಿಲ್ಲೆಯ ನವಲಗುಂದ ಬಳಿಯ ಅಣ್ಣಿಗೇರಿಯಲ್ಲಿ ಪತ್ತೆಯಾಗಿದ್ದ ಬುರುಡೆಗಳ ರಹಸ್ಯ ಬಹಿರಂಗಗೊಂಡಿದ್ದು, ಸುಮಾರು 600 ವರ್ಷಗಳಷ್ಟು ಹಿಂದಿನವು ಎಂಬ ಅಂಶವನ್ನು ತಜ್ಞರು ಬಹಿರಂಗಪಡಿಸಿದ್ದಾರೆ.
ಅಣ್ಣಿಗೇರಿ ರಾಷ್ಟ್ರೀಯ ಹೆದ್ದಾರಿಯಲ್ಲಿನ ಜಮೀನೊಂದರಲ್ಲಿ ಚರಂಡಿ ತೋಡುತ್ತಿದ್ದ ವೇಳೆ ಆಕಸ್ಮಿಕವಾಗಿ ನೂರಾರು ತಲೆ ಬುರುಡೆಗಳು ಪತ್ತೆಯಾಗಿದ್ದವು. ಬುರುಡೆಗಳ ಬಗ್ಗೆ ತನಿಖೆ ನಡೆಸಿದ ಹುಬ್ಬಳಿ ಕಿಮ್ಸ್ನ ವಿಧಿವಿಜ್ಞಾನ ಪ್ರಯೋಗಾಲಯದ ತಜ್ಞರು, ಆರು ನೂರು ವರ್ಷಗಳಷ್ಟು ಹಿಂದೆಯೇ ಅವುಗಳನ್ನು ಹೂಳಲಾಗಿದೆ. ಸಾಮೂಹಿಕ ಹತ್ಯೆ ಮಾಡಿ ತಲೆಗಳನ್ನು ಹೂತಿರುವ ಸಾಧ್ಯತೆಗಳಿವೆ ಎಂದು ತಜ್ಞರು ವರದಿ ನೀಡಿದ್ದಾರೆ ಎಂದು ಜಿಲ್ಲಾಧಿಕಾರಿ ದರ್ಪಣ್ ಜೈನ್ ತಿಳಿಸಿದ್ದಾರೆ.
ನಗರದಲ್ಲಿಂದು ಕರೆಯಲಾಗಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ತಲೆ ಬುರುಡೆಗಳನ್ನು ಯಾವ ಕಾಲದಲ್ಲಿ ಹೂಳಲಾಗಿದೆ ಎಂಬ ಬಗ್ಗೆ ಹೈದರಾಬಾದ್ ವಿಧಿ ವಿಜ್ಞಾನ ಪ್ರಯೋಗಾಲಯದಿಂದ ಮತ್ತೊಂದು ವರದಿಯನ್ನು ನಿರೀಕ್ಷಿಸಲಾಗುತ್ತಿದೆ. ಮೂರು ಬುರುಡೆಗಳನ್ನು ಪರೀಕ್ಷಿಸಿದ್ದು, ಎರಡು ಪುರುಷರ ಮತ್ತು ಒಂದು ಮಹಿಳೆಯದ್ದು ಎಂದು ತಿಳಿದು ಬಂದಿದೆ ಎಂದರು.
ಪ್ರಸ್ತುತ ಪತ್ತೆಯಾದ ಸ್ಥಳವನ್ನು ಸಂರಕ್ಷಿತ ಪ್ರದೇಶವೆಂದು ಘೋಷಿಸಿದ್ದು, ಬುರುಡೆ ಪತ್ತೆಯಾದ ಸ್ಥಳವನ್ನು ಸುರಕ್ಷಿತವಾಗಿರಿಸಲಾಗಿದೆ. ಮಳೆಗಾಲವಾದ ಹಿನ್ನೆಲೆಯಲ್ಲಿ ಉತ್ಖನನ ಮಾಡಲು ಅಡ್ಡಿಯಾಗಿದೆ. ಬೇಸಿಗೆಯಲ್ಲಿ ಉತ್ಖನನ ಮಾಡಿ ಅಣ್ಣಿಗೇರಿ ಬುರುಡೆ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಮಗ್ರ ಪರೀಕ್ಷೆ ನಡೆಸಲಾಗುತ್ತದೆ ಎಂದು ಅವರು ವಿವರ ನೀಡಿದರು.
ಬುರುಡೆ ವೀಕ್ಷಣೆಗೆ ಪ್ರವಾಸಿಗರು: ಬುರುಡೆ ಪತ್ತೆಯಾದ ಸ್ಥಳಕ್ಕೆ ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಬರುತ್ತಿದ್ದು, ಅಣ್ಣಿಗೇರಿ ಪ್ರವಾಸಿ ತಾಣವಾಗಿ ಮಾರ್ಪಾಟಾಗಿದೆ. ಈ ಮಧ್ಯೆ ಇತಿಹಾಸ ವಿಷಯದಲ್ಲಿ ಆಸಕ್ತರಾಗಿರುವ ವಿದ್ಯಾರ್ಥಿಗಳು ಕೂಡ ಸ್ಥಳಕ್ಕೆ ಬಂದು ಪರಿಶೀಲನೆ ನಡೆಸುತ್ತಿದ್ದಾರೆ.
ದೇಶದ ಮುಂದೆ ನಾಡು ತಲೆತಗ್ಗಿಸುವಂತಹ ಘಟನೆ ರಾಜ್ಯದ ಸದನದಲ್ಲಿ ನಡೆದಿದೆ. ನಾಡಿನ ಇಬ್ಬರು ಸಚಿವರು ಸದನದಲ್ಲೇ ತಮ್ಮ ಮೊಬೈಲ್ ಮೂಲಕ ಬ್ಲೂಫಿಲಂ ನೋಡಿ, ಜನತೆಯ ಮುಂದೆ ರೆಡ್ಹ ...
Click here to post your views ಶಿಕ್ಷಣದ ಹಕ್ಕು ನಮ್ಮ ಸಂವಿಧಾನದಲ್ಲಿ ಮೂಲಭೂತ ಹಕ್ಕು ಅಲ್ಲ. ನಮ್ಮ ದೇಶದಲ್ಲಿ ಒಂದು ಲಕ್ಷಕ್ಕೂ ಹ ...
ಮುಂಬೈ ಚುಕ್ಕಿ ಸಂಕುಲದ ಗೆಳೆಯರ ಬಳಗ ಪ್ರಸ್ತುತ ಪಡಿಸಿದ ನಾಟಕ ‘ಕುವೆಂಪು ಕಂಡ ಮಂಥರೆ’ ಮುಂಬ ...
ಒಂದಲ್ಲ ಒಂದು ಕಾರಣದಿಂದ ಸಮಾಜದಲ್ಲಿ ಬೇರೂರಿರುವ ಅಸಮಾನತೆಯನ್ನು ಹೋಗಲಾಡಿಸಲು ಕೇಂದ್ರ ಮತ್ತು ರ ...
ಹುಬ್ಬಳ್ಳಿಯಲ್ಲಿ ನಡೆದ ಆರೆಸ್ಸೆಸ್ನ ಹಿಂದೂಶಕ್ತಿ ಸಂಗಮ ಕಂಡು ರೋಮಾಂಚಿತಗೊಂಡ ಸ್ನೇಹಿತರ ...
‘ಕರಾವಳಿಯಲ್ಲಿ ಒಳ್ಳೆಯ ಬ್ಯಾರಿಗಳೂ ಇದ್ದಾರೆ ಗೊತ್ತುಂಟಾ... ಗೋ ಸಮಾವೇಶ ಮಾಡಿದ ಹಾಗೆ ನಾವು ಮ ...
ಆಧುನಿಕ ತತ್ವಶಾಸದ ಇತಿಹಾಸದಲ್ಲಿ ಸ್ವಾಮಿ ವಿವೇಕಾನಂದರಿಗೆ ಪ್ರಮುಖವಾದ ಸ್ಥಾನವಿದೆ.ವೇದಾಂತ ...
ನಾನು ಮನೋವೈದ್ಯೆಯಲ್ಲ.ಆದರೆ ಮನಸ್ಸನ್ನು ಪ್ರೀತಿಸುವುದರಿಂದ ಮಾತ್ರ ಈ ಪ್ರಕರಣದ ವಿಶ್ಲೇಷಣೆ ನನ ...
ಕಳೆದ ಕೆಲವು ದಿನಗಳಿಂದ ಟೆಲಿವಿಶನ್ ಉದ್ದಿಮೆಯ ಪ್ರಬಲೀಕರಣ ಕುರಿತ ವಿಷಯ ವಾಣಿಜ್ಯ ಸುದ್ದ ...