ಬೆಂಗಳೂರು, ಸೆ. 3: ಶರಣಾಗಲಿಚ್ಛಿಸುವ ನಕ್ಸಲೀಯರ ವೃತ್ತಿಪರ ತರಬೇತಿಗೆ 2 ಸಾವಿರ ರೂ. ಸಹಾಯಧನ, 2 ಲಕ್ಷ ರೂ.ಸಾಲ ಸೌಲಭ್ಯ, ಆಯುಧ- ಸ್ಫೋಟಕಗಳು ಮತ್ತು ಸಂಪರ್ಕ ಸಾಧನಗಳನ್ನು ಒಪ್ಪಿಸಿದರೆ 25 ಸಾವಿರ ರೂ.ನಗದು ಬಹುಮಾನ ನೀಡುವುದಾಗಿ ಪೊಲೀಸ್ ಇಲಾಖೆ ಘೋಷಿಸಿದೆ. ಈ ಸಂಬಂಧ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಅಜಯ್ಕುಮಾರ್ ಸಿಂಗ್ ಪ್ರಕಟನೆ ಹೊರಡಿಸಿದ್ದು, ಉಳಿದ ನಕ್ಸಲೀಯರನ್ನು ಹಿಡಿಯಲು ಶರಣಾದವರು ಮಾಹಿತಿ ಒದಗಿಸಿದರೆ ಹೆಚ್ಚುವರಿ ಪ್ರೋತ್ಸಾಹಧನ ನೀಡಲಾಗುವುದು. ಶರಣಾದ ವ್ಯಕ್ತಿಗಳ ವಿರುದ್ಧ ದಾಖಲಾಗಿರುವ ಎಲ್ಲ ಮೊಕದ್ದಮೆಗಳನ್ನು ಹಿಂಪಡೆಯಲಾಗುವುದು.
ಶರಣಾಗುವ ವ್ಯಕಿಗಳು ಕರ್ನಾಟಕ ರಾಜ್ಯಕ್ಕೆ ಸೇರಿದವರಾಗಿರಬೇಕು ಎಂದು ತಿಳಿಸಿದ್ದಾರೆ. 2011ರ ಮೇ ತಿಂಗಳ ವರೆಗೆ ಈ ಅವಕಾಶ ಕಲ್ಪಿಸಲಾಗಿದೆ. ಮಲೆನಾಡಿನ ಸಮಸ್ಯೆಗಳ ನಿವಾರಣೆ ಮತ್ತು ಶರಣಾಗತಿ ಹಾಗೂ ನಕ್ಸಲೀಯರ ಹಿಂಸಾತ್ಮಕ ಕೃತ್ಯಗಳನ್ನು ಶಸ್ತ್ರದ ಮೂಲಕ ಹತ್ತಿಕ್ಕಲು ನಿರ್ಧಾರ ಕೈಗೊಂಡಿದೆ ಎಂದು ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಅಜಯ್ಕುಮಾರ್ ಸಿಂಗ್ ಹೇಳಿದ್ದಾರೆ.
ನಕ್ಸಲೀಯರ ಶರಣಾಗತಿಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು, ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿಗಳು ಹಾಗೂ ನಾಗರಿಕರ ಸಂಘಟನೆಗಳ ಸದಸ್ಯರ ನೇತೃತ್ವದಲ್ಲಿ ಸಮಿತಿಯನ್ನು ರಚಿಸಲಾಗಿದೆ. ಈ ಸಮಿತಿ ಶಿಫಾರಸು ಮಾಡಿದ ಹೆಸರುಗಳನ್ನು ರಾಜ್ಯದ ಮುಖ್ಯ ಕಾರ್ಯದರ್ಶಿಗೆ ಕಳುಹಿಸಲಾಗುವುದು. ಮುಖ್ಯ ಕಾರ್ಯದರ್ಶಿಗಳು, ಗೃಹ ಇಲಾಖೆಯ ಕಾರ್ಯ ದರ್ಶಿ, ಪೊಲೀಸ್ ಮಹಾ ನಿರ್ದೇಶಕ, ಗುಪ್ತವಾರ್ತೆ ವಿಭಾಗದ ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕ ಹಾಗೂ ನಕ್ಸಲ್ ನಿಗ್ರಹದಳದ ಮುಖ್ಯಸ್ಥ ನೇತೃತ್ವದ ಸಮಿತಿ ಶರಣಾಗುವ ನಕ್ಸಲರ ಹೆಸರುಗಳನ್ನು ಅಂತಿಮಗೊಳಿಸುತ್ತದೆ ಎಂದು ಪ್ರಕಟಣೆ ತಿಳಿಸಿದೆ.
ಈ ನಾಡಿನ ಆತ್ಮ ಸಾಕ್ಷಿಯನ್ನು ಕಲಕುವಂತಹ ಮೂರು ಘಟನೆಗಳು ನಮ್ಮ ಮುಂದೆಯೇ ನಡೆದು ಹೋಗಿದೆ.ಆದರೆ ಅದಕ್ಕೆ ಸ್ಪಂದಿಸುವಂತಹ ಸಂವೇದನೆಗಳನ್ನು ಮಾತ್ರ ನಾಡು ಕಳೆದುಕ ...
Click here to post your views ಶತಮಾನಗಳಿಂದ ಕಾಡಿನಲ್ಲಿ ನೆಲೆಸಿರುವ ಆದಿವಾಸಿಗಳು ಹಕ್ಕುಪತ್ರ ಮತ್ತು ಸಾಗುವಳಿ ಚೀಟಿ ಕೇಳಿದರ ...
ಈ ಇಂಡಿಯಾಕ್ಕೆ ಸಂವಿಧಾನ ಕೊಟ್ಟ ಮಹಾನ್ ನಾಯಕರ ಆ ವ್ಯಂಗ್ಯ ಚಿತ್ರ ಬಂದಾಗ ಅದನ್ನ ...
ಎಸೆಸೆಲ್ಸಿ ಫಲಿತಾಂಶ ಪ್ರಕಟವಾಗಿ ತೇರ್ಗಡೆಯಾದ ಮಕ್ಕಳು ಸಂಭ್ರಮಿಸುತ್ತಿರುವ ಈ ಸಂದರ್ಭದಲ್ಲ ...
ನಾವು ಬೆಳಗಾಂನಿಂದ ಅವ್ಯಕ್ತ ಭಾವನೆಗಳನ್ನು ತುಂಬಿಕೊಂಡು ಹುಬ್ಬಳ್ಳಿ ಮತ್ತು ಧಾರವಾಡಕ್ಕೆ ಹೊರಟೆವ ...
ಭಾರತ ಕಂಡ ಅತ್ಯಂತ ಸಂವೇದನಾಶೀಲ ಮತ್ತು ಪ್ರತಿಭಾವಂತ ವ್ಯಂಗ್ಯಚಿತ್ರಕಾರ ಶಂಕರ್ ಅವರು 1949ರಲ ...
ಮೊದಲಿಗೆ ಅಯ್ಯಂಗಾರ್ ಗೋಳ್ವಾಲ್ಕರ್ಗೆ ಈ ಕೆಳಗಿನ ಅಂಶಗಳತ್ತ ಬೆಟ್ಟು ಮಾಡಿದರು:ಮೊದಲನೆಯದು, ಶ ...
ಭೇಟಿಯನ್ನು ವರದಿ ಮಾಡುವುದಕ್ಕಾಗಿ ನಾಗಪುರದಿಂದ ಹೋಗಿದ್ದ ಪೊಲೀಸ್ ಅಧಿಕಾರಿಯ ಮೇಲೆ ಮಿಶ ...
ಭಾರತೀಯ ಸಂವಿಧಾನವನ್ನು ಟೀಕಿಸಿದ ಗೋಳ್ವಾಲ್ಕರ್, ಓರ್ವ ಸಾಮಾನ್ಯ ವ್ಯಕ್ತಿ ಅರ್ಥ ಮಾಡ ...