ಹೊಸದಿಲ್ಲಿ, ಸೆ.3: ಸ್ಪಾಟ್ ಫಿಕ್ಸಿಂಗ್ ಹಗರಣದಲ್ಲಿ ವಿಚಾರಣೆ ಎದುರಿಸುತ್ತಿರುವ ಪಾಕ್ನ ಕಳಂಕಿತ ಆಟಗಾರರಾದ ಸಲ್ಮಾನ್ ಬಟ್, ಮುಹಮ್ಮದ್ ಅಸೀಫ್ ಮತ್ತು ಮುಹಮ್ಮದ್ ಅಮೀರ್ರನ್ನು ಐಸಿಸಿಯು ಇಂದು ಅಮಾನತುಗೊಳಿಸಿದೆ. ಐಸಿಸಿಯ ಭ್ರಷ್ಟಾಚಾರ ವಿರೋಧಿ ನೀತಿ ಸಂಹಿತೆಯನ್ವಯ ಅವರನ್ನು ಅಮಾನತು ಮಾಡಲಾಗಿದೆ ಎಂದು ಐಸಿಸಿ ಮೂಲಗಳು ತಿಳಿಸಿವೆ.
ಪಿಸಿಬಿಯು ಗುರುವಾರ ಈ ಮೂವರು ಆಟಗಾರರನ್ನು ತಂಡದಿಂದ ಕೈಬಿಟ್ಟಿತ್ತು. ಇದೀಗ ಐಸಿಸಿಯು ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ಹೆಜ್ಜೆಯಿರಿಸಿದೆ.
ಐಸಿಸಿ ಅಮಾನತುಗೊಂಡಿರುವ ಆಟಗಾರರಿಗೆ ಈ ಬಗ್ಗೆ ಮಾಹಿತಿ ನೀಡಿದ್ದು, ಐಸಿಸಿಯು ಕೈಗೊಂಡಿರುವ ಕ್ರಮದಂತೆ ಆಟಗಾರರು ತಮ್ಮ ಮೇಲಿನ ಆರೋಪದ ವಿಚಾರಣೆ ನಡೆದು ,ತೀರ್ಪು ಬರುವ ತನಕ ಅವರು ಆಡುವಂತಿಲ್ಲ ಮತ್ತು ಆಟಕ್ಕೆ ಸಂಬಂಧಿಸಿದ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವಂತಿಲ್ಲ. ಈ ಸಂಬಂಧ ಇಂದು ಹೇಳಿಕೆ ನೀಡಿರುವ ಐಸಿಸಿಯ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಹಾರೊನ್ ಲೊರ್ಗಟ್ '' ನಾವು ಕ್ರಿಕೆಟ್ನಲ್ಲಿ ಭ್ರಷ್ಟಾಚಾರವನ್ನು ಸಹಿಸುವುದಿಲ್ಲ. ಒಂದು ವೇಳೆ ಇಂತಹ ಪ್ರಕರಣಗಳಲ್ಲಿ ಸಿಕ್ಕಿ ಬಿದ್ದವರಿಗೆ ಆಜೀವ ನಿಷೇಧ ಹೇರಲಾಗುವುದು'' ಎಂದು ತಿಳಿಸಿದ್ಧಾರೆ.
ಐಸಿಸಿ ಕಳಂಕಿತರ ವಿರುದ್ಧ ಕ್ರಮ ಕೈಗೊಂಡಿದ್ದರೂ, ಪಾಕ್ ತನ್ನ ಆಟಗಾರರ ರಕ್ಷಣೆಗೆ ಮುಂದಾಗಿದೆ. ಲಂಡನ್ನಲ್ಲಿರುವ ಪಾಕ್ನ ಹೈಕಮಿಶನರ್ ಹಸನ್, ಬಟ್, ಅಸೀಫ್ ಮತ್ತು ಅಮೀರ್ ಅಮಾಯಕರು. ಅವರು ಮ್ಯಾಚ್ಫಿಕ್ಸಿಂಗ್ನಲ್ಲಿ ಭಾಗಿಯಾಗಿಲ್ಲ ಎಂಬ ಕ್ಲೀನ್ ಚಿಟ್ ನೀಡಿದ್ದಾರೆ. ಬುಕ್ಕಿಗಳ ಏಜೆಂಟ್ ಮಜ್ಹಾರ್ ಮಜೀದ್ ಪ್ರಕರಣದ ಆರೋಪಿ. ಕೆಲವು ಏಶ್ಯನ್ ಬುಕ್ಕಿಗಳು ಶಾಮೀಲಾಗಿದ್ದಾರೆ'' ಎಂದು ಅವರು ವಾಗ್ದಾಳಿ ನಡೆಸಿದ್ದಾರೆ.
ಈ ನಾಡಿನ ಆತ್ಮ ಸಾಕ್ಷಿಯನ್ನು ಕಲಕುವಂತಹ ಮೂರು ಘಟನೆಗಳು ನಮ್ಮ ಮುಂದೆಯೇ ನಡೆದು ಹೋಗಿದೆ.ಆದರೆ ಅದಕ್ಕೆ ಸ್ಪಂದಿಸುವಂತಹ ಸಂವೇದನೆಗಳನ್ನು ಮಾತ್ರ ನಾಡು ಕಳೆದುಕ ...
Click here to post your views ಶತಮಾನಗಳಿಂದ ಕಾಡಿನಲ್ಲಿ ನೆಲೆಸಿರುವ ಆದಿವಾಸಿಗಳು ಹಕ್ಕುಪತ್ರ ಮತ್ತು ಸಾಗುವಳಿ ಚೀಟಿ ಕೇಳಿದರ ...
ಈ ಇಂಡಿಯಾಕ್ಕೆ ಸಂವಿಧಾನ ಕೊಟ್ಟ ಮಹಾನ್ ನಾಯಕರ ಆ ವ್ಯಂಗ್ಯ ಚಿತ್ರ ಬಂದಾಗ ಅದನ್ನ ...
ಎಸೆಸೆಲ್ಸಿ ಫಲಿತಾಂಶ ಪ್ರಕಟವಾಗಿ ತೇರ್ಗಡೆಯಾದ ಮಕ್ಕಳು ಸಂಭ್ರಮಿಸುತ್ತಿರುವ ಈ ಸಂದರ್ಭದಲ್ಲ ...
ನಾವು ಬೆಳಗಾಂನಿಂದ ಅವ್ಯಕ್ತ ಭಾವನೆಗಳನ್ನು ತುಂಬಿಕೊಂಡು ಹುಬ್ಬಳ್ಳಿ ಮತ್ತು ಧಾರವಾಡಕ್ಕೆ ಹೊರಟೆವ ...
ಭಾರತ ಕಂಡ ಅತ್ಯಂತ ಸಂವೇದನಾಶೀಲ ಮತ್ತು ಪ್ರತಿಭಾವಂತ ವ್ಯಂಗ್ಯಚಿತ್ರಕಾರ ಶಂಕರ್ ಅವರು 1949ರಲ ...
ಮೊದಲಿಗೆ ಅಯ್ಯಂಗಾರ್ ಗೋಳ್ವಾಲ್ಕರ್ಗೆ ಈ ಕೆಳಗಿನ ಅಂಶಗಳತ್ತ ಬೆಟ್ಟು ಮಾಡಿದರು:ಮೊದಲನೆಯದು, ಶ ...
ಭೇಟಿಯನ್ನು ವರದಿ ಮಾಡುವುದಕ್ಕಾಗಿ ನಾಗಪುರದಿಂದ ಹೋಗಿದ್ದ ಪೊಲೀಸ್ ಅಧಿಕಾರಿಯ ಮೇಲೆ ಮಿಶ ...
ಭಾರತೀಯ ಸಂವಿಧಾನವನ್ನು ಟೀಕಿಸಿದ ಗೋಳ್ವಾಲ್ಕರ್, ಓರ್ವ ಸಾಮಾನ್ಯ ವ್ಯಕ್ತಿ ಅರ್ಥ ಮಾಡ ...