ಹೊಸದಿಲ್ಲಿ, ಸೆ.3: ಸ್ಪಾಟ್ ಫಿಕ್ಸಿಂಗ್ ಹಗರಣದಲ್ಲಿ ವಿಚಾರಣೆ ಎದುರಿಸುತ್ತಿರುವ ಪಾಕ್ನ ಕಳಂಕಿತ ಆಟಗಾರರಾದ ಸಲ್ಮಾನ್ ಬಟ್, ಮುಹಮ್ಮದ್ ಅಸೀಫ್ ಮತ್ತು ಮುಹಮ್ಮದ್ ಅಮೀರ್ರನ್ನು ಐಸಿಸಿಯು ಇಂದು ಅಮಾನತುಗೊಳಿಸಿದೆ. ಐಸಿಸಿಯ ಭ್ರಷ್ಟಾಚಾರ ವಿರೋಧಿ ನೀತಿ ಸಂಹಿತೆಯನ್ವಯ ಅವರನ್ನು ಅಮಾನತು ಮಾಡಲಾಗಿದೆ ಎಂದು ಐಸಿಸಿ ಮೂಲಗಳು ತಿಳಿಸಿವೆ.
ಪಿಸಿಬಿಯು ಗುರುವಾರ ಈ ಮೂವರು ಆಟಗಾರರನ್ನು ತಂಡದಿಂದ ಕೈಬಿಟ್ಟಿತ್ತು. ಇದೀಗ ಐಸಿಸಿಯು ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ಹೆಜ್ಜೆಯಿರಿಸಿದೆ.
ಐಸಿಸಿ ಅಮಾನತುಗೊಂಡಿರುವ ಆಟಗಾರರಿಗೆ ಈ ಬಗ್ಗೆ ಮಾಹಿತಿ ನೀಡಿದ್ದು, ಐಸಿಸಿಯು ಕೈಗೊಂಡಿರುವ ಕ್ರಮದಂತೆ ಆಟಗಾರರು ತಮ್ಮ ಮೇಲಿನ ಆರೋಪದ ವಿಚಾರಣೆ ನಡೆದು ,ತೀರ್ಪು ಬರುವ ತನಕ ಅವರು ಆಡುವಂತಿಲ್ಲ ಮತ್ತು ಆಟಕ್ಕೆ ಸಂಬಂಧಿಸಿದ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವಂತಿಲ್ಲ. ಈ ಸಂಬಂಧ ಇಂದು ಹೇಳಿಕೆ ನೀಡಿರುವ ಐಸಿಸಿಯ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಹಾರೊನ್ ಲೊರ್ಗಟ್ '' ನಾವು ಕ್ರಿಕೆಟ್ನಲ್ಲಿ ಭ್ರಷ್ಟಾಚಾರವನ್ನು ಸಹಿಸುವುದಿಲ್ಲ. ಒಂದು ವೇಳೆ ಇಂತಹ ಪ್ರಕರಣಗಳಲ್ಲಿ ಸಿಕ್ಕಿ ಬಿದ್ದವರಿಗೆ ಆಜೀವ ನಿಷೇಧ ಹೇರಲಾಗುವುದು'' ಎಂದು ತಿಳಿಸಿದ್ಧಾರೆ.
ಐಸಿಸಿ ಕಳಂಕಿತರ ವಿರುದ್ಧ ಕ್ರಮ ಕೈಗೊಂಡಿದ್ದರೂ, ಪಾಕ್ ತನ್ನ ಆಟಗಾರರ ರಕ್ಷಣೆಗೆ ಮುಂದಾಗಿದೆ. ಲಂಡನ್ನಲ್ಲಿರುವ ಪಾಕ್ನ ಹೈಕಮಿಶನರ್ ಹಸನ್, ಬಟ್, ಅಸೀಫ್ ಮತ್ತು ಅಮೀರ್ ಅಮಾಯಕರು. ಅವರು ಮ್ಯಾಚ್ಫಿಕ್ಸಿಂಗ್ನಲ್ಲಿ ಭಾಗಿಯಾಗಿಲ್ಲ ಎಂಬ ಕ್ಲೀನ್ ಚಿಟ್ ನೀಡಿದ್ದಾರೆ. ಬುಕ್ಕಿಗಳ ಏಜೆಂಟ್ ಮಜ್ಹಾರ್ ಮಜೀದ್ ಪ್ರಕರಣದ ಆರೋಪಿ. ಕೆಲವು ಏಶ್ಯನ್ ಬುಕ್ಕಿಗಳು ಶಾಮೀಲಾಗಿದ್ದಾರೆ'' ಎಂದು ಅವರು ವಾಗ್ದಾಳಿ ನಡೆಸಿದ್ದಾರೆ.
ದೇಶದ ಮುಂದೆ ನಾಡು ತಲೆತಗ್ಗಿಸುವಂತಹ ಘಟನೆ ರಾಜ್ಯದ ಸದನದಲ್ಲಿ ನಡೆದಿದೆ. ನಾಡಿನ ಇಬ್ಬರು ಸಚಿವರು ಸದನದಲ್ಲೇ ತಮ್ಮ ಮೊಬೈಲ್ ಮೂಲಕ ಬ್ಲೂಫಿಲಂ ನೋಡಿ, ಜನತೆಯ ಮುಂದೆ ರೆಡ್ಹ ...
Click here to post your views ಶಿಕ್ಷಣದ ಹಕ್ಕು ನಮ್ಮ ಸಂವಿಧಾನದಲ್ಲಿ ಮೂಲಭೂತ ಹಕ್ಕು ಅಲ್ಲ. ನಮ್ಮ ದೇಶದಲ್ಲಿ ಒಂದು ಲಕ್ಷಕ್ಕೂ ಹ ...
ಮುಂಬೈ ಚುಕ್ಕಿ ಸಂಕುಲದ ಗೆಳೆಯರ ಬಳಗ ಪ್ರಸ್ತುತ ಪಡಿಸಿದ ನಾಟಕ ‘ಕುವೆಂಪು ಕಂಡ ಮಂಥರೆ’ ಮುಂಬ ...
ಒಂದಲ್ಲ ಒಂದು ಕಾರಣದಿಂದ ಸಮಾಜದಲ್ಲಿ ಬೇರೂರಿರುವ ಅಸಮಾನತೆಯನ್ನು ಹೋಗಲಾಡಿಸಲು ಕೇಂದ್ರ ಮತ್ತು ರ ...
ಹುಬ್ಬಳ್ಳಿಯಲ್ಲಿ ನಡೆದ ಆರೆಸ್ಸೆಸ್ನ ಹಿಂದೂಶಕ್ತಿ ಸಂಗಮ ಕಂಡು ರೋಮಾಂಚಿತಗೊಂಡ ಸ್ನೇಹಿತರ ...
‘ಕರಾವಳಿಯಲ್ಲಿ ಒಳ್ಳೆಯ ಬ್ಯಾರಿಗಳೂ ಇದ್ದಾರೆ ಗೊತ್ತುಂಟಾ... ಗೋ ಸಮಾವೇಶ ಮಾಡಿದ ಹಾಗೆ ನಾವು ಮ ...
ಆಧುನಿಕ ತತ್ವಶಾಸದ ಇತಿಹಾಸದಲ್ಲಿ ಸ್ವಾಮಿ ವಿವೇಕಾನಂದರಿಗೆ ಪ್ರಮುಖವಾದ ಸ್ಥಾನವಿದೆ.ವೇದಾಂತ ...
ನಾನು ಮನೋವೈದ್ಯೆಯಲ್ಲ.ಆದರೆ ಮನಸ್ಸನ್ನು ಪ್ರೀತಿಸುವುದರಿಂದ ಮಾತ್ರ ಈ ಪ್ರಕರಣದ ವಿಶ್ಲೇಷಣೆ ನನ ...
ಕಳೆದ ಕೆಲವು ದಿನಗಳಿಂದ ಟೆಲಿವಿಶನ್ ಉದ್ದಿಮೆಯ ಪ್ರಬಲೀಕರಣ ಕುರಿತ ವಿಷಯ ವಾಣಿಜ್ಯ ಸುದ್ದ ...