ಹುಬ್ಬಳ್ಳಿ, ಜ.27: ರಾಜ್ಯ ಬಜೆಟ್ ಮಂಡಿಸುವ ಕುರಿತು ಉಂಟಾಗಿರುವ ಗೊಂದಲಕ್ಕೆ ತೆರೆ ಎಳೆದಿರುವ ಮುಖ್ಯ ಮಂತ್ರಿ ಡಿ.ವಿ. ಸದಾನಂದ ಗೌಡ, ಮಾ.9ರಂದು ಮುಂಗಡ ಪತ್ರವನ್ನು ತಾನೇ ಮಂಡಿಸುತ್ತೇನೆ, ಅದರಲ್ಲಿ ಯಾವುದೇ ಸಂಶಯ ಬೇಡ ಎಂದು ಹೇಳಿದ್ದಾರೆ.
ನಗರದಲ್ಲಿ ನಡೆದ ‘ಹಿಂದೂ ಶಕ್ತಿ ಸಂಗಮ’ದಲ್ಲಿ ಪಾಲ್ಗೊಳ್ಳಲು ಆಗಮಿಸಿದ್ದ ವೇಳೆ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರ ರೊಂದಿಗೆ ಮಾತನಾಡಿದ ಅವರು, ಬಜೆಟ್ನ್ನು ಬೇರೆ ಯಾರೂ ಮಂಡಿ ಸುವುದಿಲ್ಲ. ಅದನ್ನು ತಾನೇ ಮಂಡಿಸುತ್ತೇನೆ ಎಂದು ಸ್ಪಷ್ಟಪಡಿಸಿದರು.
ಬಜೆಟ್ ಮಂಡನೆಯ ಕುರಿತು ಹಲವು ರೀತಿಯ ಊಹಾಪೋಹ ಗಳೆದ್ದಿದ್ದು, ಇಂತಹ ಸಂಶಯ ಬೇಡ. ಬಜೆಟ್ ಮಂಡನೆಗೆ ಎಲ್ಲ ರೀತಿಯ ಸಿದ್ಧತೆ ಮಾಡಿಕೊಂಡಿದ್ದೇನೆ ಎಂದು ಡಿವಿ ಇದೇ ವೇಳೆ ತಿಳಿಸಿದರು.
ಯಾವೆಲ್ಲ ಇಲಾಖೆಗಳಿಗೆ ಒತ್ತು ನೀಡಬೇಕು ಎಂಬ ಕುರಿತು ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಚರ್ಚಿಸಿ ಮಾ.9ರಂದು ಉತ್ತಮ ಬಜೆಟನ್ನು ಮಂಡಿಸುತ್ತೇನೆ ಎಂದ ಸದಾನಂದ ಗೌಡ, ಈ ತಿಂಗಳ 30ರಂದು ಆರಂಭವಾಗಲಿರುವ ಅಧಿವೇಶನ ದಲ್ಲಿಯೂ ಬಜೆಟ್ಗೆ ಸಂಬಂಧಿಸಿ ಚರ್ಚೆ ನಡೆಸಲಾಗುವುದು. ಎಲ್ಲ ರೀತಿ ಯಿಂದಲೂ ಬಜೆಟ್ ಕುರಿತು ಮಾಹಿತಿ ಕಲೆ ಹಾಕಿ ಮಂಡಿಸುತ್ತೇನೆ ಎಂದರು.
ನಗರದಲ್ಲಿಂದಿನಿಂದ ನಡೆಯಲಿರುವ ಹಿಂದೂ ಶಕ್ತಿ ಸಂಗಮದಲ್ಲಿ ಒಬ್ಬ ಆರೆಸ್ಸೆಸ್ನ ಸ್ವಯಂ ಸೇವಕನಾಗಿ ಭಾಗವಹಿಸುತ್ತಿದ್ದೇನೆ. ಇಲ್ಲಿ ಸರಕಾರ, ಬಿಜೆಪಿ ನಾಯಕರ ಕುರಿತು ಮಾತನಾಡುವುದಿಲ್ಲ. ಎಲ್ಲವೂ ರಾಷ್ಟ್ರ ಜಾಗೃತಿ, ಯವಜನರನ್ನು ದೇಶ ಕಟ್ಟಲು ಬಳಸುವ ಕುರಿತು ಚರ್ಚಿಸಲಾಗುವುದು ಎಂದರು. ಯಾವೆಲ್ಲ ಇಲಾಖೆಗಳಿಗೆ ಒತ್ತು ನೀಡಬೇಕು ಎಂಬ ಕುರಿತು ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಚರ್ಚಿಸಿ ಮಾ.9ರಂದು ಉತ್ತಮ ಬಜೆಟನ್ನು ಮಂಡಿಸುತ್ತೇನೆ ಎಂದ ಸದಾನಂದ ಗೌಡ, ಈ ತಿಂಗಳ 30ರಂದು ಆರಂಭವಾಗಲಿರುವ ಅಧಿವೇಶನ ದಲ್ಲಿಯೂ ಬಜೆಟ್ಗೆ ಸಂಬಂಧಿಸಿ ಚರ್ಚೆ ನಡೆಸಲಾಗುವುದು. ಎಲ್ಲ ರೀತಿ ಯಿಂದಲೂ ಬಜೆಟ್ ಕುರಿತು ಮಾಹಿತಿ ಕಲೆ ಹಾಕಿ ಮಂಡಿಸುತ್ತೇನೆ ಎಂದರು.
ನಗರದಲ್ಲಿಂದಿನಿಂದ ನಡೆಯಲಿರುವ ಹಿಂದೂ ಶಕ್ತಿ ಸಂಗಮದಲ್ಲಿ ಒಬ್ಬ ಆರೆಸ್ಸೆಸ್ನ ಸ್ವಯಂ ಸೇವಕನಾಗಿ ಭಾಗವಹಿಸುತ್ತಿದ್ದೇನೆ. ಇಲ್ಲಿ ಸರಕಾರ, ಬಿಜೆಪಿ ನಾಯಕರ ಕುರಿತು ಮಾತನಾಡುವುದಿಲ್ಲ. ಎಲ್ಲವೂ ರಾಷ್ಟ್ರ ಜಾಗೃತಿ, ಯವಜನರನ್ನು ದೇಶ ಕಟ್ಟಲು ಬಳಸುವ ಕುರಿತು ಚರ್ಚಿಸಲಾಗುವುದು ಎಂದರು.
ಗಣವೇಷದಲ್ಲಿ ಭಾಗವಹಿಸಿದ ಸಿಎಂ: ತಾನು ಆರೆಸ್ಸೆಸ್ನ ಕಟ್ಟುನಿಟ್ಟಿನ ಸಿಪಾಯಿ ಎಂದು ಹೇಳಿದ ಮುಖ್ಯಮಂತ್ರಿ ಸದಾನಂದ ಗೌಡ, ತಮ್ಮ ಶ್ವೇತ ವಸ್ತ್ರ ಕಳಚಿ ಗಣವೇಶ ಧರಿಸಿ ಪಾಲ್ಗೊಂಡಿದ್ದು ವಿಶೇಷವಾಗಿತ್ತು. ನಗರದ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಸಿಎಂ, ಬಳಿಕ ತಮ್ಮ ಶ್ವೇತ ವಸ್ತ್ರ ಕಳಚಿ, ಖಾಕಿ ಚಡ್ಡಿ, ಬಿಳಿ ಅಂಗಿ, ತಲೆಗೆ ಟೋಪಿ ಹಾಕಿ ಹಿಂದೂ ಶಕ್ತಿ ಸಂಗಮದಲ್ಲಿ ಭಾಗವಹಿಸಿ ತಮ್ಮ ನಿಷ್ಠೆಯನ್ನು ಪ್ರದರ್ಶಿಸಿದರು. ಹಿಂದೂ ಶಕ್ತಿ ಸಂಗಮವನ್ನು ಗುರುಸಿದ್ದ ರಾಜಯೋಗೀಂದ್ರ ಸ್ವಾಮೀಜಿ ಉದ್ಘಾಟಿಸಿದರು. ಈ ವೇಳೆ ಆರೆಸ್ಸೆಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಯ್ಯೆಜಿ ಜೋಷಿ ಸೇರಿದಂತೆ ಹಲವರು ಹಾಜರಿದ್ದರು.
ನಮ್ಮ ಶಿಕ್ಷಣ ವ್ಯವಸ್ಥೆಯ ರುದ್ರ ರೂಪವೊಂದು ಹರ್ಯಾಣದ ಅನ್ವಾಂಟ್ ಶಾಲೆಯೊಂದರಲ್ಲಿ ಪ್ರಕಟವಾಗಿದೆ.ಹೋಮ್ ವರ್ಕ್ ಮಾಡದ ಒಂದೇ ಒಂದು ಕಾರಣಕ್ಕಾಗಿ ಎಲ್ಕೆಜಿ ವಿದ್ಯ ...
Click here to post your views ಸಾಮ್ರಾಜ್ಯವಾದಿ ದೇಶಗಳಾದ ಅಮೆರಿಕ, ಇಂಗ್ಲೆಂಡ್, ಜರ್ಮನಿ, ಜಪಾನ್... ದೇಶಗಳು ಇಂದು ತೀವ್ರ ಆರ್ಥಿಕ ...
ಅಣ್ಣಾ ಹಝಾರೆಯ ಭ್ರಷ್ಟಾಚಾರ ವಿರೋಧಿ ಆಂದೋಲನಕ್ಕೆ ಆರೆಸ್ಸೆಸ್ ಬೆಂಬಲ ನೀಡಿತ್ತು ಎಂದು ಕಳ ...
ನವ ಉದಾರೀಕರಣದ ದುರಾಕ್ರಮಣದ ಈ ಕಾಲದಲ್ಲಿ ಕೋಮುವಾದ ನಾನಾ ವೇಷಧರಿಸಿ ವಕ್ಕರಿಸುತ್ತಿರುವ ಆತಂಕದ ...
ಚಿಕ್ಕಮಗಳೂರು-ಉಡುಪಿ ಕ್ಷೇತ್ರಕ್ಕೆ ಚುನಾವಣೆ ಘೋಷಣೆ ಯಾದುದೇ ಬಿಜೆಪಿ, ಅರ್ಹ ಅಭ್ಯರ್ಥಿಯನ್ನು ಹ ...
‘ಸತ್ಯಂ ಶಿವಂ ಸುಂದರಂ...’ ಎಂಬ ಹಿಂದಿ ಸಿನಿಮಾದ ಈ ಶೀರ್ಷಿಕೆಯ ಹಾಡನ್ನು ಮತ್ತೆ ಮತ್ತೆ ಹಾಡಿಕ ...
ಇತ್ತೀಚೆಗೆ ಎಲ್ಲೆಂದರಲ್ಲಿ ಒಂದು ಬೇಡಿಕೆ ಸಹಜ ವೆಂಬತೆ ಎದ್ದಿದೆ. ಅದು ಸಚಿನ್ತೆಂಡೂಲ್ಕರ್ಗೆ ಭಾರತ ರತ ...
ಕಳೆದ ಸಂಚಿಕೆಯಲ್ಲಿ ಗಮನಿಸಿದಂತೆ ಪ್ರಾಥಮಿಕ ಶಿಕ್ಷಣದಲ್ಲಿ ಸೌಹಾರ್ದ ಬದುಕು ಮತ್ತು ವೈಜ್ಞ ...
ಕಳೆದ ಸಂಚಿಕೆಯಲ್ಲಿ ಗಮನಿಸಿದಂತೆ ಪ್ರಾಥಮಿಕ ಶಿಕ್ಷಣದಲ್ಲಿ ಸೌಹಾರ್ದ ಬದುಕು ಮತ್ತು ವೈಜ್ಞ ...