mail-img print-img

ಇಂದಿನಿಂದ ಮಿನಿ ಮಹಾ ಚುನಾವಣೆ : ಮಣಿಪುರ ವಿಧಾನ ಸಭೆಗೆ ಇಂದು ಮತದಾನ

ಶನಿವಾರ - ಜನವರಿ -28-2012

ಇಂಫಾಲ, ಜ.27: ಉಗ್ರಗಾಮಿ ಗಳ ಬಾಂಬ್ ದಾಳಿಯ ನೆರಳಿ ನಲ್ಲಿ ಮಣಿಪುರ ವಿಧಾನ ಸಭೆಗೆ ನಾಳೆ ಮತದಾನ ನಡೆಯಲಿದೆ. ಈ ಮೂಲಕ ಮಿನಿ ಮಹಾ ಚುನಾವಣೆಯೆಂದೇ ವ್ಯಾಖ್ಯಾ ನಿಸಲಾಗಿರುವ ಪಂಚರಾಜ್ಯ ವಿಧಾನಸಭಾ ಚುನಾವಣೆಗಳಿಗೆ ಚಾಲನೆ ದೊರೆಯಲಿದೆ. ಕೆಲವು ಪ್ರದೇಶದಲ್ಲಿ ಉಗ್ರಗಾಮಿಗಳು ಚುನಾವಣಾ ಪ್ರಕ್ರಿಯೆಯನ್ನು ಅಸ್ತವ್ಯಸ್ತಗೊಳಿಸಲು ಯತ್ನಿಸಬಹುದೆಂದು ವರದಿಗಳ ನಡುವೆಯೇ 60 ಸದಸ್ಯ ಬಲದ ವಿಧಾನ ಸಭೆಗೆ ಚುನಾವಣೆ ನಡೆಯಲಿರುವ ಈಶಾನ್ಯ ರಾಜ್ಯದ ಭದ್ರತಾ ಪರಿಸ್ಥಿತಿಯ ಬಗ್ಗೆ ಅಧಿಕಾರಿಗಳು ನಿಕಟ ನಿಗಾ ವಹಿಸಿದ್ದಾರೆ. ಮಣಿಪುರದ 10ನೆ ವಿಧಾನ ಸಭೆ ಪ್ರವೇಶಿಸಲು ಒಟ್ಟು 279 ಮಂದಿ ಕಣಕ್ಕಿಳಿದಿದ್ದಾರೆ.

ರಾಜ್ಯದ ಭದ್ರತಾ ಸಿಬ್ಬಂದಿ ಹಾಜರಾಗದ ಕಡೆಗಳಲ್ಲಿ ಕೇವಲ ಕೇಂದ್ರೀಯ ಭದ್ರತಾ ಸಿಬ್ಬಂದಿಯನ್ನೇ ನಿಯೋಜಿಸಲಾಗುವುದೆಂದು ಅಧಿಕೃತ ಮೂಲಗಳು ಇಂದಿಲ್ಲಿ ತಿಳಿಸಿದೆ. ಆದರೆ, ಅಗತ್ಯವಾದಲ್ಲಿ ರಾಜ್ಯದ ಪೊಲೀಸರು ಮತಗಟ್ಟೆ ವ್ಯವಸ್ಥಾಪನೆಗೆ ಲಭ್ಯರಿರುವರೆಂದೂ ಅವು ಹೇಳಿವೆ. ಪಂಚ ರಾಜ್ಯ ವಿಧಾನ ಸಭೆಗಳ ಚುನಾವಣೆಯು ಮಣಿಪುರದಿಂದ ನಾಳೆ ಆರಂಭಗೊಳ್ಳಲಿದ್ದು, ಪಂಜಾಬ್ ಹಾಗೂ ಉತ್ತರಾಖಂಡ್‌ನಲ್ಲಿ ಜ. 30 ಹಾಗೂ ಗೋವಾದಲ್ಲಿ ಮಾ. 3ಕ್ಕೆ ನಡೆಯಲಿದೆ. ಮಾ. 3ರಂದು 7 ಹಂತಗಳ ಉತ್ತರ ಪ್ರದೇಶ ವಿಧಾನ ಸಭೆಯ ಚುನಾವಣೆ ಕೊನೆಗೊಳ್ಳಲಿದೆ. ಮಣಿಪುರದ ಹೆಚ್ಚಿನ ಮತಗಟ್ಟೆಗಳಿಗೆ ಭದ್ರತಾ ಸಿಬ್ಬಂದಿ ತಲುಪಿದ್ದಾರೆ. ಇಂಫಾಲ ಪೂರ್ವ ಹಾಗೂ ಪಶ್ಚಿಮ ಜಿಲ್ಲೆಗಳಿಗೆ ಇಂದು ರಾತ್ರಿಯೊಳಗೆ ಅವರು ತಲುಪಬಹುದೆಂದು ಮೂಲಗಳು ತಿಳಿಸಿವೆ. ಒಟ್ಟು 2, 367 ಮತಗಟ್ಟೆಗಳಿಗೆ 12, 967 ಭದ್ರತಾ ಸಿಬ್ಬಂದಿಯಿರುತ್ತಾರೆ. ಮುಂಜಾನೆ 7ರಿಂದ ಸಂಜೆ 4ರ ವರೆಗೆ ಮತದಾನ ನಡೆಯಲಿದೆ.

ರಾಜ್ಯದ ಒಟ್ಟು 17,40,476 ಅರ್ಹ ಮತದಾರರಲ್ಲಿ 8,82,236 ಮಂದಿ ಮಹಿಳೆಯರಾಗಿದ್ದಾರೆ. ಕಳೆದ ಕೆಲವು ದಿನಗಳಿಂದ ರಾಜ್ಯದಲ್ಲಿ ಅಲ್ಲಲ್ಲಿ ಸ್ಫೋಟಗಳು ನಡೆಯುತ್ತಿದ್ದು, ಉಗ್ರರು ಕೆಲವು ಕಡೆಗಳಲ್ಲಿ ಅಭ್ಯರ್ಥಿಗಳ ಮೇಲೆ ದಾಳಿ ನಡೆಸಬಹುದೆಂಬ ವರದಿಗಳು ರಾಜ್ಯದ ರಾಜಧಾನಿಗೆ ಹರಿದು ಬರುತ್ತಿವೆ. ಪಶ್ಚಿಮ ಇಂಫಾಲ ಜಿಲ್ಲೆಯ ಮಾಜಿ ಸರಕಾರಿ ಅಧಿಕಾರಿಯೊಬ್ಬರ ನಿವಾಸಕ್ಕೆ ಇಂದು ಮುಂಜಾನೆಯಷ್ಟೇ ಬಾಂಬ್ ಎಸೆದ ದುಷ್ಕರ್ಮಿಗಳು ಒಬ್ಬನ ಹತ್ಯೆ ನಡೆಸಿದ್ದಾರೆ.
ವೈದ್ಯೆ ವಿಲಾಸಿನಿ ದೇವಿ ಎಂಬವರ ನಿವಾಸದ ಮೇಲೆ ಈ ದಾಳಿ ನಡೆದಿದ್ದು, ಅವರ ಪತಿ ಕಳೆದ ಚುನಾವಣೆಯಲ್ಲಿ ಸ್ಪರ್ಧಿಸಿದ್ದರೆಂದು ಮೂಲಗಳು ತಿಳಿಸಿವೆ. ಗಣರಾಜ್ಯೋತ್ಸವದ ದಿನ ಉಗ್ರರ ರಾಜಧಾನಿ ಸಂಕೀರ್ಣದಲ್ಲಿ ಪ್ರಬಲ ಬಾಂಬೊಂದನ್ನು ಸ್ಫೋಟಿಸಿದ್ದರು. ಆದರೆ ಯಾವುದೇ ಸಾವು- ನೋವು ಸಂಭವಿಸಿಲ್ಲ. ಜ. 25ರ ರಾತ್ರಿ ದುಷ್ಕರ್ಮಿಗಳು ಕಕ್ವಾ ಎಂಬಲ್ಲಿ ಎರಡು ಸ್ಫೋಟಗಳನ್ನು ನಡೆಸಿದ್ದರು.

Careers Talk
Post Your Comments

  Your Comment **fields are required  
  ಕನ್ನಡದಲ್ಲಿಟೈಪ್ ಮಾಡಲು CTRL + G ಒತ್ತಿರಿ  
 
 
   
   
   



ಸಂಪಾದಕೀಯ

ಶಿಲಾಯುಗದ ಸಂಸ್ಕೃತಿ

ಈ ನಾಡಿನ ಆತ್ಮ ಸಾಕ್ಷಿಯನ್ನು ಕಲಕುವಂತಹ ಮೂರು ಘಟನೆಗಳು ನಮ್ಮ ಮುಂದೆಯೇ ನಡೆದು ಹೋಗಿದೆ.ಆದರೆ ಅದಕ್ಕೆ ಸ್ಪಂದಿಸುವಂತಹ ಸಂವೇದನೆಗಳನ್ನು ಮಾತ್ರ ನಾಡು ಕಳೆದುಕ ...


ನಿಮ್ಮ ಅನಿಸಿಕೆ

postClick here to post your views
EPAPER
access

ಪ್ರಜೆಗಳ ಕೊರಳು ಹಿಸುಕುವ ಪ್ರಭುತ್ವ

ಶತಮಾನಗಳಿಂದ ಕಾಡಿನಲ್ಲಿ ನೆಲೆಸಿರುವ ಆದಿವಾಸಿಗಳು ಹಕ್ಕುಪತ್ರ ಮತ್ತು ಸಾಗುವಳಿ ಚೀಟಿ ಕೇಳಿದರ ...


- ಸನತ್‌ಕುಮಾರ ಬೆಳಗಲಿ

ವ್ಯಂಗ್ಯಚಿತ್ರ ನಿಷೇಧದ ಕುರಿತು ಪ್ರಗತಿಪರರ ನಿಲುವಿಗೆ ಒಂದು ಪ್ರತಿಕ್ರಿಯೆ

ಈ  ಇಂಡಿಯಾಕ್ಕೆ ಸಂವಿಧಾನ ಕೊಟ್ಟ ಮಹಾನ್ ನಾಯಕರ ಆ ವ್ಯಂಗ್ಯ ಚಿತ್ರ ಬಂದಾಗ ಅದನ್ನ ...


- ಮಹಾದೇವ ಹಡಪದ

ಅಂಕಪಟ್ಟಿ ಜೀವನಕ್ಕೆ ಅಂಕದ ಪರದೆ ಎಳೆಯದಿರಲಿ

ಎಸೆಸೆಲ್ಸಿ ಫಲಿತಾಂಶ ಪ್ರಕಟವಾಗಿ ತೇರ್ಗಡೆಯಾದ ಮಕ್ಕಳು ಸಂಭ್ರಮಿಸುತ್ತಿರುವ ಈ ಸಂದರ್ಭದಲ್ಲ ...


- ಜ್ಯೋತಿ ಗುರುಪ್ರಸಾದ್

ಆ ಹುಡುಗಿಯರಲ್ಲಿ ತಾಯ್ತನದ ಹೆಚ್ಚುಗಾರಿಕೆ

ನಾವು ಬೆಳಗಾಂನಿಂದ ಅವ್ಯಕ್ತ ಭಾವನೆಗಳನ್ನು ತುಂಬಿಕೊಂಡು ಹುಬ್ಬಳ್ಳಿ ಮತ್ತು ಧಾರವಾಡಕ್ಕೆ ಹೊರಟೆವ ...


- ಶೂದ್ರ ಶ್ರೀನಿವಾಸ್

ವ್ಯಂಗ್ಯವಿರುವುದು ಇಂದಿನ ಸಂದರ್ಭದಲ್ಲಿ..;ಭಾಗ-1

ಭಾರತ ಕಂಡ ಅತ್ಯಂತ ಸಂವೇದನಾಶೀಲ ಮತ್ತು ಪ್ರತಿಭಾವಂತ ವ್ಯಂಗ್ಯಚಿತ್ರಕಾರ ಶಂಕರ್ ಅವರು 1949ರಲ ...


- ಶಿವಸುಂದರ್

ಆರೆಸ್ಸೆಸ್ ಮೇಲಿನ ನಿಷೇಧ ಹೇಗೆ ತೆರವಾಯಿತು? ;ಭಾಗ-7

ಮೊದಲಿಗೆ ಅಯ್ಯಂಗಾರ್ ಗೋಳ್ವಾಲ್ಕರ್‌ಗೆ ಈ ಕೆಳಗಿನ ಅಂಶಗಳತ್ತ ಬೆಟ್ಟು ಮಾಡಿದರು:ಮೊದಲನೆಯದು, ಶ ...


- ರಾಕೇಶ್ ಅಂಕಿತ್

ಆರೆಸ್ಸೆಸ್ ಮೇಲಿನ ನಿಷೇಧ ಹೇಗೆ ತೆರವಾಯಿತು? ಭಾಗ-6

ಭೇಟಿಯನ್ನು ವರದಿ ಮಾಡುವುದಕ್ಕಾಗಿ ನಾಗಪುರದಿಂದ ಹೋಗಿದ್ದ ಪೊಲೀಸ್ ಅಧಿಕಾರಿಯ ಮೇಲೆ ಮಿಶ ...


- ರಾಕೇಶ್ ಅಂಕಿತ್

ಆರೆಸ್ಸೆಸ್ ಮೇಲಿನ ನಿಷೇಧ ಹೇಗೆ ತೆರವಾಯಿತು? ಭಾಗ-5

ಭಾರತೀಯ ಸಂವಿಧಾನವನ್ನು ಟೀಕಿಸಿದ ಗೋಳ್ವಾಲ್ಕರ್, ಓರ್ವ ಸಾಮಾನ್ಯ ವ್ಯಕ್ತಿ ಅರ್ಥ ಮಾಡ ...


- ರಾಕೇಶ್ ಅಂಕಿತ್