
ಹೊಸದಿಲ್ಲಿ, ಸೆ.3: ಭಾರತೀಯ ವಾಯುಸೇನೆಯು ಶುಕ್ರವಾರ ನಡೆದ ಅದ್ದೂರಿ ಸಮಾರಂಭದಲ್ಲಿ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ರಿಗೆ ಗೌರವ ಗ್ರೂಪ್ ಕ್ಯಾಪ್ಟನ್ ಹುದ್ದೆಯನ್ನು ಪ್ರದಾನ ಮಾಡಿತು. ಆ ಮೂಲಕ ಸಚಿನ್ ಐಎಎಫ್ನಿಂದ ಈ ಗೌರವ ಪಡೆದುಕೊಂಡ ಮೊದಲ ಕ್ರೀಡಾಪಟು ಎನಿಸಿಕೊಂಡಿದ್ದಾರೆ.
ವಿಶ್ವ ಕ್ರಿಕೆಟ್ನಲ್ಲಿ ದೇಶಕ್ಕೆ ನೀಡಿರುವ ಸಚಿನ್ರ ಸಾಧನೆಗಳನ್ನು ಪರಿಗಣಿಸಿ ಈ ಗೌರವ ನೀಡಲಾಗಿದೆ. ಹೊಸದಿಲ್ಲಿಯ ವಾಯುಸೇನಾ ಸಭಾಂಗಣದಲ್ಲಿ ನಡೆದ ಸಮಾರಂಭದಲ್ಲಿ ಐಎಎಫ್ ಹಿರಿಯಾಧಿಕಾರಿ ಮಾರ್ಶಲ್ ಪಿವಿ ನಾಕ್ ಸಚಿನ್ರಿಗೆ ಗೌರವ ಪ್ರದಾನ ಮಾಡಿದರು. 2008ರಲ್ಲಿ ವಿಶ್ವಕಪ್ ವಿಜೇತ ಭಾರತ ತಂಡದ ನಾಯಕ ಕಪಿಲ್ ದೇವ್ ಭಾರತದ ಭೂಸೇನೆಯಿಂದ ಲೆಪ್ಟಿನಂಟ್ ಕರ್ನಲ್ ಗೌರವ ಪಡೆದಿದ್ದರು. ಮಲಯಾಳ ನಟ ಮೋಹನ್ಲಾಲ್ರನ್ನು ಕೂಡಾ ಕರ್ನಲ್ ಪದವಿ ನೀಡಿ ಗೌರವಿಸಲಾ ಗಿತ್ತು.
ಸಚಿನ್ರವರ ಗ್ರೂಪ್ ಕ್ಯಾಪ್ಟನ್ ಪದವಿಯು ಭೂ ಸೇನೆಯ ಕರ್ನಲ್ ರ್ಯಾಂಕ್ಗೆ ಸಮಾನವಾಗಿರಲಿದೆ. ‘ಐಎಎಫ್ನಿಂದ ಗೌರವ ಗ್ರೂಪ್ ಕ್ಯಾಪ್ಟನ್ ಪಡೆದಿರುವ ಕ್ಷಣವನ್ನು ಮರೆಯಲು ಸಾಧ್ಯವಿಲ್ಲ. ಎಲ್ಲರಿಗೂ ನಾನು ಧನ್ಯವಾದ ಅರ್ಪಿಸುತ್ತೇನೆ. ಈ ಗೌರವ ಸಂಪಾದಿಸಿದ್ದು ನನ್ನ ಕನಸು ನನಸಾಗಿದಂತಾಗಿದೆ’ ಎಂದು ಲಿಟ್ಲ್ ಮಾಸ್ಟರ್ ನುಡಿದರು.
ನಾನೀಗ ಭಾರತ ವಾಯುಸೇನೆಯ ಭಾಗವಾಗಿರುವು ದರಲ್ಲಿ ಹೆಮ್ಮೆಯಿದೆ. ಹೆಚ್ಚಿನ ಸಂಖ್ಯೆಯ ಯುವ ಜನತೆ ವಾಯುಸೇನೆಗೆ ಸೇರಬೇಕೆಂಬುದು ನನ್ನ ಬಯಕೆ. ವಾಯುಸೇನೆಗೆ ಸೇರುವ ಮೂಲಕ ದೇಶ ಸೇವೆ ಸಲ್ಲಿಸಬೇಕು. ಇದನ್ನು ಸಾಧಿಸಲು ಕನಸು ಕಾಣಬೇಕು. ಯಾಕೆಂದರೆ ಕನಸುಗಳು ಮಾತ್ರ ನನಸಾಗುತ್ತದೆ ಎಂದವರು ಸೇರಿಸಿದರು. ಸಚಿನ್ರಿಗೆ ಗ್ರೂಪ್ ಕ್ಯಾಪ್ಟನ್ ಪದವಿಗೆ ಆಯ್ಕೆ ಮಾಡಲಾಗಿದೆ ಎಂದು ರಾಷ್ಟ್ರಪತಿ ಪ್ರತಿಭಾ ಪಾಟೀಲ್ ಜೂ.23ರಂದು ಘೋಷಿಸಿದ್ದರು.
ದೇಶದ ಮುಂದೆ ನಾಡು ತಲೆತಗ್ಗಿಸುವಂತಹ ಘಟನೆ ರಾಜ್ಯದ ಸದನದಲ್ಲಿ ನಡೆದಿದೆ. ನಾಡಿನ ಇಬ್ಬರು ಸಚಿವರು ಸದನದಲ್ಲೇ ತಮ್ಮ ಮೊಬೈಲ್ ಮೂಲಕ ಬ್ಲೂಫಿಲಂ ನೋಡಿ, ಜನತೆಯ ಮುಂದೆ ರೆಡ್ಹ ...
Click here to post your views ಶಿಕ್ಷಣದ ಹಕ್ಕು ನಮ್ಮ ಸಂವಿಧಾನದಲ್ಲಿ ಮೂಲಭೂತ ಹಕ್ಕು ಅಲ್ಲ. ನಮ್ಮ ದೇಶದಲ್ಲಿ ಒಂದು ಲಕ್ಷಕ್ಕೂ ಹ ...
ಮುಂಬೈ ಚುಕ್ಕಿ ಸಂಕುಲದ ಗೆಳೆಯರ ಬಳಗ ಪ್ರಸ್ತುತ ಪಡಿಸಿದ ನಾಟಕ ‘ಕುವೆಂಪು ಕಂಡ ಮಂಥರೆ’ ಮುಂಬ ...
ಒಂದಲ್ಲ ಒಂದು ಕಾರಣದಿಂದ ಸಮಾಜದಲ್ಲಿ ಬೇರೂರಿರುವ ಅಸಮಾನತೆಯನ್ನು ಹೋಗಲಾಡಿಸಲು ಕೇಂದ್ರ ಮತ್ತು ರ ...
ಹುಬ್ಬಳ್ಳಿಯಲ್ಲಿ ನಡೆದ ಆರೆಸ್ಸೆಸ್ನ ಹಿಂದೂಶಕ್ತಿ ಸಂಗಮ ಕಂಡು ರೋಮಾಂಚಿತಗೊಂಡ ಸ್ನೇಹಿತರ ...
‘ಕರಾವಳಿಯಲ್ಲಿ ಒಳ್ಳೆಯ ಬ್ಯಾರಿಗಳೂ ಇದ್ದಾರೆ ಗೊತ್ತುಂಟಾ... ಗೋ ಸಮಾವೇಶ ಮಾಡಿದ ಹಾಗೆ ನಾವು ಮ ...
ಆಧುನಿಕ ತತ್ವಶಾಸದ ಇತಿಹಾಸದಲ್ಲಿ ಸ್ವಾಮಿ ವಿವೇಕಾನಂದರಿಗೆ ಪ್ರಮುಖವಾದ ಸ್ಥಾನವಿದೆ.ವೇದಾಂತ ...
ನಾನು ಮನೋವೈದ್ಯೆಯಲ್ಲ.ಆದರೆ ಮನಸ್ಸನ್ನು ಪ್ರೀತಿಸುವುದರಿಂದ ಮಾತ್ರ ಈ ಪ್ರಕರಣದ ವಿಶ್ಲೇಷಣೆ ನನ ...
ಕಳೆದ ಕೆಲವು ದಿನಗಳಿಂದ ಟೆಲಿವಿಶನ್ ಉದ್ದಿಮೆಯ ಪ್ರಬಲೀಕರಣ ಕುರಿತ ವಿಷಯ ವಾಣಿಜ್ಯ ಸುದ್ದ ...