ಸಚಿನ್‌ಗೆ ವಾಯುಸೇನೆಯ ಗ್ರೂಪ್ ಕ್ಯಾಪ್ಟನ್ ಗೌರವ ಪ್ರದಾನ
mail-img print-img

ಸಚಿನ್‌ಗೆ ವಾಯುಸೇನೆಯ ಗ್ರೂಪ್ ಕ್ಯಾಪ್ಟನ್ ಗೌರವ ಪ್ರದಾನ

ಶನಿವಾರ - ಸೆಪ್ಟೆಂಬರ್ -04-2010

ಹೊಸದಿಲ್ಲಿ, ಸೆ.3: ಭಾರತೀಯ ವಾಯುಸೇನೆಯು ಶುಕ್ರವಾರ ನಡೆದ ಅದ್ದೂರಿ ಸಮಾರಂಭದಲ್ಲಿ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್‌ರಿಗೆ ಗೌರವ ಗ್ರೂಪ್ ಕ್ಯಾಪ್ಟನ್ ಹುದ್ದೆಯನ್ನು ಪ್ರದಾನ ಮಾಡಿತು. ಆ ಮೂಲಕ ಸಚಿನ್ ಐಎಎಫ್‌ನಿಂದ ಈ ಗೌರವ ಪಡೆದುಕೊಂಡ ಮೊದಲ ಕ್ರೀಡಾಪಟು ಎನಿಸಿಕೊಂಡಿದ್ದಾರೆ.

ವಿಶ್ವ ಕ್ರಿಕೆಟ್‌ನಲ್ಲಿ ದೇಶಕ್ಕೆ ನೀಡಿರುವ ಸಚಿನ್‌ರ ಸಾಧನೆಗಳನ್ನು ಪರಿಗಣಿಸಿ ಈ ಗೌರವ ನೀಡಲಾಗಿದೆ. ಹೊಸದಿಲ್ಲಿಯ ವಾಯುಸೇನಾ ಸಭಾಂಗಣದಲ್ಲಿ ನಡೆದ ಸಮಾರಂಭದಲ್ಲಿ ಐಎಎಫ್ ಹಿರಿಯಾಧಿಕಾರಿ ಮಾರ್ಶಲ್ ಪಿವಿ ನಾಕ್ ಸಚಿನ್‌ರಿಗೆ ಗೌರವ ಪ್ರದಾನ ಮಾಡಿದರು. 2008ರಲ್ಲಿ ವಿಶ್ವಕಪ್ ವಿಜೇತ ಭಾರತ ತಂಡದ ನಾಯಕ ಕಪಿಲ್ ದೇವ್ ಭಾರತದ ಭೂಸೇನೆಯಿಂದ ಲೆಪ್ಟಿನಂಟ್ ಕರ್ನಲ್ ಗೌರವ ಪಡೆದಿದ್ದರು. ಮಲಯಾಳ ನಟ ಮೋಹನ್‌ಲಾಲ್‌ರನ್ನು ಕೂಡಾ ಕರ್ನಲ್ ಪದವಿ ನೀಡಿ ಗೌರವಿಸಲಾ ಗಿತ್ತು.

ಸಚಿನ್‌ರವರ ಗ್ರೂಪ್ ಕ್ಯಾಪ್ಟನ್ ಪದವಿಯು ಭೂ ಸೇನೆಯ ಕರ್ನಲ್ ರ್ಯಾಂಕ್‌ಗೆ ಸಮಾನವಾಗಿರಲಿದೆ. ‘ಐಎಎಫ್‌ನಿಂದ ಗೌರವ ಗ್ರೂಪ್ ಕ್ಯಾಪ್ಟನ್ ಪಡೆದಿರುವ ಕ್ಷಣವನ್ನು ಮರೆಯಲು ಸಾಧ್ಯವಿಲ್ಲ. ಎಲ್ಲರಿಗೂ ನಾನು ಧನ್ಯವಾದ ಅರ್ಪಿಸುತ್ತೇನೆ. ಈ ಗೌರವ ಸಂಪಾದಿಸಿದ್ದು ನನ್ನ ಕನಸು ನನಸಾಗಿದಂತಾಗಿದೆ’ ಎಂದು ಲಿಟ್ಲ್ ಮಾಸ್ಟರ್ ನುಡಿದರು.

ನಾನೀಗ ಭಾರತ ವಾಯುಸೇನೆಯ ಭಾಗವಾಗಿರುವು ದರಲ್ಲಿ ಹೆಮ್ಮೆಯಿದೆ. ಹೆಚ್ಚಿನ ಸಂಖ್ಯೆಯ ಯುವ ಜನತೆ ವಾಯುಸೇನೆಗೆ ಸೇರಬೇಕೆಂಬುದು ನನ್ನ ಬಯಕೆ. ವಾಯುಸೇನೆಗೆ ಸೇರುವ ಮೂಲಕ ದೇಶ ಸೇವೆ ಸಲ್ಲಿಸಬೇಕು. ಇದನ್ನು ಸಾಧಿಸಲು ಕನಸು ಕಾಣಬೇಕು. ಯಾಕೆಂದರೆ ಕನಸುಗಳು ಮಾತ್ರ ನನಸಾಗುತ್ತದೆ ಎಂದವರು ಸೇರಿಸಿದರು. ಸಚಿನ್‌ರಿಗೆ ಗ್ರೂಪ್ ಕ್ಯಾಪ್ಟನ್ ಪದವಿಗೆ ಆಯ್ಕೆ ಮಾಡಲಾಗಿದೆ ಎಂದು ರಾಷ್ಟ್ರಪತಿ ಪ್ರತಿಭಾ ಪಾಟೀಲ್ ಜೂ.23ರಂದು ಘೋಷಿಸಿದ್ದರು.

Careers Talk
Post Your Comments

  Your Comment **fields are required  
  ಕನ್ನಡದಲ್ಲಿಟೈಪ್ ಮಾಡಲು CTRL + G ಒತ್ತಿರಿ  
 
 
   
   
   



ಸಂಪಾದಕೀಯ

ಮೂರೂ ಬಿಟ್ಟವರು ಊರಿಗೆ ದೊಡ್ಡವರು

ದೇಶದ ಮುಂದೆ ನಾಡು ತಲೆತಗ್ಗಿಸುವಂತಹ ಘಟನೆ ರಾಜ್ಯದ ಸದನದಲ್ಲಿ ನಡೆದಿದೆ. ನಾಡಿನ ಇಬ್ಬರು ಸಚಿವರು ಸದನದಲ್ಲೇ ತಮ್ಮ ಮೊಬೈಲ್ ಮೂಲಕ ಬ್ಲೂಫಿಲಂ ನೋಡಿ, ಜನತೆಯ ಮುಂದೆ ರೆಡ್‌ಹ ...


ನಿಮ್ಮ ಅನಿಸಿಕೆ

postClick here to post your views
EPAPER
access

ಬಡವರ ಮಕ್ಕಳಿಗೆ ನಿರಾಕರಿಸಲ್ಪಟ್ಟ ಶಿಕ್ಷಣ

ಶಿಕ್ಷಣದ ಹಕ್ಕು ನಮ್ಮ ಸಂವಿಧಾನದಲ್ಲಿ ಮೂಲಭೂತ ಹಕ್ಕು ಅಲ್ಲ. ನಮ್ಮ ದೇಶದಲ್ಲಿ ಒಂದು ಲಕ್ಷಕ್ಕೂ ಹ ...


- ಎಸ್.ಬಾಲನ್,ಹೈಕೋರ್ಟ್ ವಕೀಲರು, ಬೆಂಗಳೂರು.

ಯಶಸ್ವಿ ರಂಗ ಪ್ರಯೋಗ ನೀಡುವ ಆತ್ಮೋಲ್ಲಾಸ

ಮುಂಬೈ ಚುಕ್ಕಿ ಸಂಕುಲದ ಗೆಳೆಯರ ಬಳಗ ಪ್ರಸ್ತುತ ಪಡಿಸಿದ ನಾಟಕ ‘ಕುವೆಂಪು ಕಂಡ ಮಂಥರೆ’ ಮುಂಬ ...


- ಗೋಪಾಲ್ ತ್ರಾಸಿ

ಅಂತರ ಜಾತಿಯ ವಿವಾಹ ಮೀಸಲಾತಿಗೆ ಅಡ್ಡಿಯಾಗದು: ಸರ್ವೋಚ್ಚ ನ್ಯಾಯಾಲಯದ ತೀರ್ಪು

ಒಂದಲ್ಲ ಒಂದು ಕಾರಣದಿಂದ ಸಮಾಜದಲ್ಲಿ ಬೇರೂರಿರುವ ಅಸಮಾನತೆಯನ್ನು ಹೋಗಲಾಡಿಸಲು ಕೇಂದ್ರ ಮತ್ತು ರ ...


- ಕೆ. ದೇಜಪ್ಪ

ಆರೆಸ್ಸೆಸ್ ಶಿಸ್ತಿನ ಒಳಗುಟ್ಟು

ಹುಬ್ಬಳ್ಳಿಯಲ್ಲಿ ನಡೆದ ಆರೆಸ್ಸೆಸ್‌ನ ಹಿಂದೂಶಕ್ತಿ ಸಂಗಮ ಕಂಡು ರೋಮಾಂಚಿತಗೊಂಡ ಸ್ನೇಹಿತರ ...


- ಸನತ್‌ ಕುಮಾರ ಬೆಳಗಲಿ

ನಿನ್ನನ್ನು ಒಳ್ಳೆಯ ಬ್ಯಾರಿ ಅಂತ ಹೇಗೆ ನಂಬುವುದು?

‘ಕರಾವಳಿಯಲ್ಲಿ ಒಳ್ಳೆಯ ಬ್ಯಾರಿಗಳೂ ಇದ್ದಾರೆ ಗೊತ್ತುಂಟಾ... ಗೋ ಸಮಾವೇಶ ಮಾಡಿದ ಹಾಗೆ ನಾವು ಮ ...


- ಚೇಳಯ್ಯ

ವಿವೇಕಾನಂದರ ವಾರಸುದಾರರು ಕೋಮುವಾದಿಗಳಲ್ಲ-ಪ್ರಗತಿಪರರು

ಆಧುನಿಕ ತತ್ವಶಾಸದ ಇತಿಹಾಸದಲ್ಲಿ ಸ್ವಾಮಿ ವಿವೇಕಾನಂದರಿಗೆ ಪ್ರಮುಖವಾದ ಸ್ಥಾನವಿದೆ.ವೇದಾಂತ ...


- ಡಾ ಜಿ. ಭಾಸ್ಕರ ಮಯ್ಯ

ಮನಸ್ಸಿನ ಅಸ್ವಸ್ಥತೆಗೆ ಮೂಲ ಕಾರಣ ಹುಡುಕಬೇಕು

ನಾನು ಮನೋವೈದ್ಯೆಯಲ್ಲ.ಆದರೆ ಮನಸ್ಸನ್ನು ಪ್ರೀತಿಸುವುದರಿಂದ ಮಾತ್ರ ಈ ಪ್ರಕರಣದ ವಿಶ್ಲೇಷಣೆ ನನ ...


- ಜ್ಯೋತಿ ಗುರುಪ್ರಸಾದ್

ದೂರಸಂಪರ್ಕ ನೀತಿ ಬೇಕಾಗಿದೆ

ಕಳೆದ ಕೆಲವು ದಿನಗಳಿಂದ ಟೆಲಿವಿಶನ್ ಉದ್ದಿಮೆಯ ಪ್ರಬಲೀಕರಣ ಕುರಿತ ವಿಷಯ ವಾಣಿಜ್ಯ ಸುದ್ದ ...


- ಅರವಿಂದ ರಾಜಗೋಪಾಲ