ಮಾನ್ಯರೆ,
ಮೈಸೂರು ಮತ್ತು ಹಾಸನ ವೈದ್ಯಕೀಯ ಕಾಲೇಜುಗಳ ಸಿಬ್ಬಂದಿ ನೇಮಕಾತಿಯಲ್ಲಿನ ಅಕ್ರಮ ಬಯಲಿಗೆ ಬಂದಿರುವುದದಿಂದ ವೈದ್ಯಕೀಯ ಸಚಿವರ ಯೋಗ್ಯತೆಯೇನೆಂದು ಜನತೆಗೆ ಈಗ ಮನವರಿಕೆಯಾಗುತ್ತಿದೆ. ಸಚಿವರ ಯಾವುದೇ ಹಸ್ತಕ್ಷೇಪ ಇಲ್ಲದೆ ಅವರ ಆಪ್ತ ಸಹಾಯಕ ಈ ಮಟ್ಟದ ಭ್ರಷ್ಟಾಚಾರದಲ್ಲಿ ತೊಡಗುವುದು ಸಾಧ್ಯವೆ?
ಉದ್ಯೋಗ ದೊರಕುವುದೆಂಬ ಆಸೆಯಲ್ಲಿ ಹಲವಾರು ಮಂದಿ ನಿರುದ್ಯೋಗಿಗಳು ಸಾಲ ಸೋಲ ಮಾಡಿ ಲಕ್ಷಾಂತರ ರೂಪಾಯಿಗಳನ್ನು ಹೊಂದಿಸಿ ಭ್ರಷ್ಟರ ಕೈಗಿಟ್ಟು ಉದ್ಯೋಗದ ನಿರೀಕ್ಷೆಯಲ್ಲಿದ್ದರು. ಆದರೆ ಅವರಿಗೆ ಉದ್ಯೋಗ ಬಿಡಿ ತಾವು ಕೊಟ್ಟ ಹಣಕ್ಕೇ ಸಂಚಕಾರ ಒದಗಿದೆ.
ಈ ನೇಮಕಾತಿಯಲ್ಲಿ ಯೋಗ್ಯತೆಗಿಂತ ಹಣಬಲವೇ ಹೆಚ್ಚಿನ ಮಾನದಂಡವಾಗಿದ್ದ ರಿಂದಾಗಿ ಅರ್ಹರು ಕೆಲಸ ಪಡೆಯದಂತಾದುದು ಸಚಿವರ ಯೋಗ್ಯತೆಗೆ ಕನ್ನಡಿ ಹಿಡಿದಂತಾಗಿದೆ.
ಆದುದರಿಂದ ಹಲವಾರು ಬಡ ಶಿಕ್ಷಿತ ನಿರುದ್ಯೋಗಿಗಳ ಜೀವನದಲ್ಲಿ ಆಟವಾಡಿದ ಈ ಪ್ರಕರಣದ ಬಗ್ಗೆ ಸರಕಾರ ಕೂಲಂಕಷ ತನಿಖೆ ನಡೆಸಬೇಕಾಗಿದೆ. ಸಂಬಂಧಿತ ವ್ಯಕ್ತಿಗಳಿಗೆ ಕಠಿಣ ಸಿಕ್ಷೆ ವಿಧಿಸಬೇಕಾಗಿದೆ. ಇಂತಹ ಗಂಭೀರ ಭ್ರಷ್ಟಾಚಾರ ಪ್ರಕರಣ ಬಯಲಾದರೂ ಸಂಪುಟದಲ್ಲಿ ಮುಂದುವರಿದಿರುವ ವೈದ್ಯಕೀಯ ಶಿಕ್ಷಣ ಸಚಿವರ ನೈತಿಕತೆಯನ್ನು ಪ್ರಶ್ನಿಸಬೇಕಾಗಿದೆ.
ಈ ನಾಡಿನ ಆತ್ಮ ಸಾಕ್ಷಿಯನ್ನು ಕಲಕುವಂತಹ ಮೂರು ಘಟನೆಗಳು ನಮ್ಮ ಮುಂದೆಯೇ ನಡೆದು ಹೋಗಿದೆ.ಆದರೆ ಅದಕ್ಕೆ ಸ್ಪಂದಿಸುವಂತಹ ಸಂವೇದನೆಗಳನ್ನು ಮಾತ್ರ ನಾಡು ಕಳೆದುಕ ...
Click here to post your views ಶತಮಾನಗಳಿಂದ ಕಾಡಿನಲ್ಲಿ ನೆಲೆಸಿರುವ ಆದಿವಾಸಿಗಳು ಹಕ್ಕುಪತ್ರ ಮತ್ತು ಸಾಗುವಳಿ ಚೀಟಿ ಕೇಳಿದರ ...
ಈ ಇಂಡಿಯಾಕ್ಕೆ ಸಂವಿಧಾನ ಕೊಟ್ಟ ಮಹಾನ್ ನಾಯಕರ ಆ ವ್ಯಂಗ್ಯ ಚಿತ್ರ ಬಂದಾಗ ಅದನ್ನ ...
ಎಸೆಸೆಲ್ಸಿ ಫಲಿತಾಂಶ ಪ್ರಕಟವಾಗಿ ತೇರ್ಗಡೆಯಾದ ಮಕ್ಕಳು ಸಂಭ್ರಮಿಸುತ್ತಿರುವ ಈ ಸಂದರ್ಭದಲ್ಲ ...
ನಾವು ಬೆಳಗಾಂನಿಂದ ಅವ್ಯಕ್ತ ಭಾವನೆಗಳನ್ನು ತುಂಬಿಕೊಂಡು ಹುಬ್ಬಳ್ಳಿ ಮತ್ತು ಧಾರವಾಡಕ್ಕೆ ಹೊರಟೆವ ...
ಭಾರತ ಕಂಡ ಅತ್ಯಂತ ಸಂವೇದನಾಶೀಲ ಮತ್ತು ಪ್ರತಿಭಾವಂತ ವ್ಯಂಗ್ಯಚಿತ್ರಕಾರ ಶಂಕರ್ ಅವರು 1949ರಲ ...
ಮೊದಲಿಗೆ ಅಯ್ಯಂಗಾರ್ ಗೋಳ್ವಾಲ್ಕರ್ಗೆ ಈ ಕೆಳಗಿನ ಅಂಶಗಳತ್ತ ಬೆಟ್ಟು ಮಾಡಿದರು:ಮೊದಲನೆಯದು, ಶ ...
ಭೇಟಿಯನ್ನು ವರದಿ ಮಾಡುವುದಕ್ಕಾಗಿ ನಾಗಪುರದಿಂದ ಹೋಗಿದ್ದ ಪೊಲೀಸ್ ಅಧಿಕಾರಿಯ ಮೇಲೆ ಮಿಶ ...
ಭಾರತೀಯ ಸಂವಿಧಾನವನ್ನು ಟೀಕಿಸಿದ ಗೋಳ್ವಾಲ್ಕರ್, ಓರ್ವ ಸಾಮಾನ್ಯ ವ್ಯಕ್ತಿ ಅರ್ಥ ಮಾಡ ...