ಹೊಸದಿಲ್ಲಿ, ಜ. 27: ಕೇರಳ ರಾಜ್ಯಪಾಲ ಎಂ.ಒ.ಎಚ್. ಫರೂಕ್ ಗುರುವಾರ ರಾತ್ರಿ ಖಾಸಗಿ ಆಸ್ಪತ್ರೆಯೊಂದರಲ್ಲಿ ನಿಧನರಾಗಿದ್ದು, ಅವರ ನಿಧನಕ್ಕೆ ಪ್ರಧಾನಿ ಮನಮೋಹನ್ ಸಿಂಗ್ ಸಹಿತ ಹಲವು ಗಣ್ಯರು ಇಂದು ಸಂತಾಪ ಸೂಚಿಸಿದ್ದಾರೆ. ಫರೂಕ್ರ ನಿಧನಕ್ಕೆ ಸಂತಾಪ ಸೂಚಿಸಿರುವ ಪ್ರಧಾನಿ ಮನಮೋಹನ್ ಸಿಂಗ್, ತನ್ನ ಆಡಳಿತ ಸಾಮರ್ಥ್ಯಕ್ಕಾಗಿ ಮತ್ತು ಅವರು ಪ್ರತಿನಿಧಿಸುತ್ತಿದ್ದ ಜನರೊಂದಿಗೆ ಪ್ರಬಲ ಬಾಂಧ್ಯವ್ಯ ಹೊಂದಿದುಕ್ಕಾಗಿ ಅವರನ್ನು ಸ್ಮರಿಸಬೇಕಾಗಿದೆ ಎಂದು ಅಭಿಪ್ರಾಯ ಪಟ್ಟಿದ್ದಾರೆ.
ಫರೂಕ್ರ ಮಗ ಫರೂಕ್ ಶಾಜಹಾನ್ಗೆ ಸಂತಾಪ ಸಂದೇಶ ರವಾನಿಸಿರುವ ಮನಮೋಹನ್ ಸಿಂಗ್, ‘‘ಕೇರಳದ ರಾಜ್ಯಪಾಲರಾಗಿ ಸೇವೆ ಸಲ್ಲಿಸುತ್ತಿದ್ದ ಎಂ.ಒ.ಎಚ್. ಫರೂಕ್ರ ನಿಧನದ ಸುದ್ದಿ ತಿಳಿದು ನನಗೆ ತುಂಬಾ ಬೇಸರವಾಯಿತು’’ ಎಂದು ತಿಳಿಸಿದ್ದಾರೆ. ‘‘ಎಂ.ಒ.ಎಚ್. ಫರೂಕ್ರ ನಿಧನದಿಂದ ದೇಶವು ಓರ್ವ ಹಿರಿಯ ರಾಜಕಾರಣಿ ಹಾಗೂ ಜನರ ನಾಯಕನನ್ನು ಕಳೆದುಕೊಂಡಂತಾಗಿದೆ. ಅವರು ವಿಭಿನ್ನ ಸಾಮರ್ಥ್ಯದಲ್ಲಿ ಐದು ದಶಕಗಳ ಕಾಲ ಸಾರ್ವಜನಿಕ ಜೀವನ ನಡೆಸಿದ ದೇಶದ ಹಿರಿಯ ರಾಜಕಾರಣಿಗಳಲ್ಲಿ ಓರ್ವರಾಗಿದ್ದರು’’ ಎಂದು ಮನಮೋಹನ್ ಸಿಂಗ್ ತಿಳಿಸಿದ್ದಾರೆ.
‘‘ಅವರು ಮೂರು ಬಾರಿ ಪಾಂಡಿಚೇರಿಯ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದರು ಮತ್ತು 90ರ ದಶಕದ ಆರಂಭದಲ್ಲಿ ಕೇಂದ್ರ ಸಚಿವ ಮಂಡಳಿಯಲ್ಲೂ ಸೇವೆ ಸಲ್ಲಿಸಿದ್ದರು. ತನ್ನ ದೀರ್ಘಾವಧಿ ಸಾರ್ವಜನಿಕ ಜೀವನದಲ್ಲಿ ಎಂ.ಒ.ಎಚ್. ಫರೂಕ್ ಅತ್ಯುನ್ನತ ಸಂಪ್ರದಾಯವನ್ನು ಹೊಂದಿದ್ದರು’’ ಎಂದು ಪ್ರಧಾನಿ ತಿಳಿಸಿದ್ದರು.
75ರ ಹರೆಯದ ಎಂ.ಒ.ಎಚ್. ಫರೂಕ್ ಗುರುವಾರ ರಾತ್ರಿ ಚೆನ್ನೈನ ಖಾಸಗಿ ಆಸ್ಪತ್ರೆಯೊಂದರಲ್ಲಿ ನಿಧನರಾಗಿದ್ದಾರೆ. ಕೇರಳದಲ್ಲಿ ಅವರ ನಿಧನದ ಪ್ರಯುಕ್ತ ಏಳು ದಿನಗಳ ಶೋಕಾಚರಣೆ ಘೋಷಿಸಲಾಗಿದೆ.
ಈ ನಾಡಿನ ಆತ್ಮ ಸಾಕ್ಷಿಯನ್ನು ಕಲಕುವಂತಹ ಮೂರು ಘಟನೆಗಳು ನಮ್ಮ ಮುಂದೆಯೇ ನಡೆದು ಹೋಗಿದೆ.ಆದರೆ ಅದಕ್ಕೆ ಸ್ಪಂದಿಸುವಂತಹ ಸಂವೇದನೆಗಳನ್ನು ಮಾತ್ರ ನಾಡು ಕಳೆದುಕ ...
Click here to post your views ಶತಮಾನಗಳಿಂದ ಕಾಡಿನಲ್ಲಿ ನೆಲೆಸಿರುವ ಆದಿವಾಸಿಗಳು ಹಕ್ಕುಪತ್ರ ಮತ್ತು ಸಾಗುವಳಿ ಚೀಟಿ ಕೇಳಿದರ ...
ಈ ಇಂಡಿಯಾಕ್ಕೆ ಸಂವಿಧಾನ ಕೊಟ್ಟ ಮಹಾನ್ ನಾಯಕರ ಆ ವ್ಯಂಗ್ಯ ಚಿತ್ರ ಬಂದಾಗ ಅದನ್ನ ...
ಎಸೆಸೆಲ್ಸಿ ಫಲಿತಾಂಶ ಪ್ರಕಟವಾಗಿ ತೇರ್ಗಡೆಯಾದ ಮಕ್ಕಳು ಸಂಭ್ರಮಿಸುತ್ತಿರುವ ಈ ಸಂದರ್ಭದಲ್ಲ ...
ನಾವು ಬೆಳಗಾಂನಿಂದ ಅವ್ಯಕ್ತ ಭಾವನೆಗಳನ್ನು ತುಂಬಿಕೊಂಡು ಹುಬ್ಬಳ್ಳಿ ಮತ್ತು ಧಾರವಾಡಕ್ಕೆ ಹೊರಟೆವ ...
ಭಾರತ ಕಂಡ ಅತ್ಯಂತ ಸಂವೇದನಾಶೀಲ ಮತ್ತು ಪ್ರತಿಭಾವಂತ ವ್ಯಂಗ್ಯಚಿತ್ರಕಾರ ಶಂಕರ್ ಅವರು 1949ರಲ ...
ಮೊದಲಿಗೆ ಅಯ್ಯಂಗಾರ್ ಗೋಳ್ವಾಲ್ಕರ್ಗೆ ಈ ಕೆಳಗಿನ ಅಂಶಗಳತ್ತ ಬೆಟ್ಟು ಮಾಡಿದರು:ಮೊದಲನೆಯದು, ಶ ...
ಭೇಟಿಯನ್ನು ವರದಿ ಮಾಡುವುದಕ್ಕಾಗಿ ನಾಗಪುರದಿಂದ ಹೋಗಿದ್ದ ಪೊಲೀಸ್ ಅಧಿಕಾರಿಯ ಮೇಲೆ ಮಿಶ ...
ಭಾರತೀಯ ಸಂವಿಧಾನವನ್ನು ಟೀಕಿಸಿದ ಗೋಳ್ವಾಲ್ಕರ್, ಓರ್ವ ಸಾಮಾನ್ಯ ವ್ಯಕ್ತಿ ಅರ್ಥ ಮಾಡ ...