ಹೊಸದಿಲ್ಲಿ, ಫೆ. 7: ಟಿಕೆಟ್ಗಳ ಬೇಡಿಕೆಯ ಒತ್ತಡವನ್ನು ಸರಿಯಾಗಿ ನಿಭಾಯಿಸುವ ನಿಟ್ಟಿನಲ್ಲಿ ರೈಲ್ವೆಯು, ಇದೀಗ ಮುಂಗಡ ಕಾದಿರಿಸುವಿಕೆಯ ಅವಧಿಯನ್ನು 90 ದಿನಗಳಿಂದ 120 ದಿನಗಳಿಗೆ ವಿಸ್ತರಿಸಲು ನಿರ್ಧರಿಸಿದೆ. ಮುಂಬರುವ ಮಾರ್ಚ್ 10ರಿಂದ ಈ ನೂತನ ನಿಯಮ ಜಾರಿಗೊಳ್ಳಲಿದೆ ಎಂದು ಮೂಲಗಳು ತಿಳಿಸಿವೆ.
‘‘ಇನ್ನು ಮುಂದೆ ಪ್ರಯಾಣಿಕನೊಬ್ಬನು 120 ದಿನಗಳಿಗೆ ಮುಂಚಿತವಾಗಿಯೇ ತನ್ನ ಪ್ರಯಾಣದ ಟಿಕೆಟ್ನ್ನು ಕಾದಿರಿಸಬಹುದಾದ ನಿಯಮವನ್ನು ಜಾರಿಗೊಳಿಸಲು ನಾವು ನಿರ್ಧರಿಸಿದ್ದೇವೆ. ತನ್ನ ಪ್ರಯಾಣವನ್ನು ಸುಗಮಗೊಳಿಸುವುದಕ್ಕೋಸ್ಕರ ಪ್ರಯಾಣಿಕನಿಗೆ ನಾಲ್ಕು ತಿಂಗಳಿಗೆ ಮುಂಚಿತವಾಗಿಯೇ ಟಿಕೆಟ್ ಕಾದಿರಿಸಬಹುದಾದ ಸೌಲಭ್ಯ ದೊರೆಯಲಿದೆ’’ ಎಂದು ರೈಲ್ವೆ ಸಚಿವಾಲಯದ ವಾಣಿಜ್ಯ ಇಲಾಖೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಈ ಉದ್ದೇಶಕ್ಕಾಗಿ ರೈಲ್ವೆ ಮಾಹಿತಿ ವ್ಯವಸ್ಥೆ ಕೇಂದ್ರದಲ್ಲಿ ಆವಶ್ಯಕ ಬದಲಾವಣೆಗಳನ್ನು ತರಲಿದೆ ಎಂದು ಅವರು ತಿಳಿಸಿದ್ದಾರೆ.
ಆದಾಗ್ಯೂ, ಕಡಿಮೆ ದೂರದ ರೈಲುಗಳಾದ ತಾಜ್ ಎಕ್ಸ್ಪ್ರೆಸ್ ಮತ್ತು ಗೋಮತಿ ಎಕ್ಸ್ಪ್ರೆಸ್ನಂತಹ ರೈಲುಗಳಲ್ಲಿ ಯಾವುದೇ ಬದಲಾವಣೆಗಳಾಗುವುದಿಲ್ಲ. ಈ ರೈಲುಗಳಿಗೆ ಮುಂಗಡ ಕಾದಿರಿಸುವಿಕೆ 15 ದಿನಗಳು ಮಾತ್ರ ಇರುತ್ತವೆ. ಇದು ಬದಲಾವಣೆಯಾಗುವುದಿಲ್ಲ ಎಂದು ಅವರು ಹೇಳಿದ್ದಾರೆ.
ವಿದೇಶಿ ಪ್ರವಾಸಿಗರಿಗೆ ಮುಂಗಡ ಟಿಕೆಟ್ ಕಾದಿರಿಸುವಿಕೆಯಲ್ಲೂ ಯಾವುದೇ ಬದಲಾವಣೆಯಿಲ್ಲ. ಅವರ ಕಾದಿರಿಸುವಿಕೆಯ ಅವಧಿ 360 ದಿನಗಳಿಗೆ ಇರುವುದರಲ್ಲಿ ಯಾವುದೇ ಬದಲಾವಣೆಯಿಲ್ಲ ಎಂದು ಅಧಿಕಾರಿ ಸ್ಪಷ್ಟ ಪಡಿಸಿದ್ದಾರೆ.
ಈ ನಾಡಿನ ಆತ್ಮ ಸಾಕ್ಷಿಯನ್ನು ಕಲಕುವಂತಹ ಮೂರು ಘಟನೆಗಳು ನಮ್ಮ ಮುಂದೆಯೇ ನಡೆದು ಹೋಗಿದೆ.ಆದರೆ ಅದಕ್ಕೆ ಸ್ಪಂದಿಸುವಂತಹ ಸಂವೇದನೆಗಳನ್ನು ಮಾತ್ರ ನಾಡು ಕಳೆದುಕ ...
Click here to post your views ಶತಮಾನಗಳಿಂದ ಕಾಡಿನಲ್ಲಿ ನೆಲೆಸಿರುವ ಆದಿವಾಸಿಗಳು ಹಕ್ಕುಪತ್ರ ಮತ್ತು ಸಾಗುವಳಿ ಚೀಟಿ ಕೇಳಿದರ ...
ಈ ಇಂಡಿಯಾಕ್ಕೆ ಸಂವಿಧಾನ ಕೊಟ್ಟ ಮಹಾನ್ ನಾಯಕರ ಆ ವ್ಯಂಗ್ಯ ಚಿತ್ರ ಬಂದಾಗ ಅದನ್ನ ...
ಎಸೆಸೆಲ್ಸಿ ಫಲಿತಾಂಶ ಪ್ರಕಟವಾಗಿ ತೇರ್ಗಡೆಯಾದ ಮಕ್ಕಳು ಸಂಭ್ರಮಿಸುತ್ತಿರುವ ಈ ಸಂದರ್ಭದಲ್ಲ ...
ನಾವು ಬೆಳಗಾಂನಿಂದ ಅವ್ಯಕ್ತ ಭಾವನೆಗಳನ್ನು ತುಂಬಿಕೊಂಡು ಹುಬ್ಬಳ್ಳಿ ಮತ್ತು ಧಾರವಾಡಕ್ಕೆ ಹೊರಟೆವ ...
ಭಾರತ ಕಂಡ ಅತ್ಯಂತ ಸಂವೇದನಾಶೀಲ ಮತ್ತು ಪ್ರತಿಭಾವಂತ ವ್ಯಂಗ್ಯಚಿತ್ರಕಾರ ಶಂಕರ್ ಅವರು 1949ರಲ ...
ಮೊದಲಿಗೆ ಅಯ್ಯಂಗಾರ್ ಗೋಳ್ವಾಲ್ಕರ್ಗೆ ಈ ಕೆಳಗಿನ ಅಂಶಗಳತ್ತ ಬೆಟ್ಟು ಮಾಡಿದರು:ಮೊದಲನೆಯದು, ಶ ...
ಭೇಟಿಯನ್ನು ವರದಿ ಮಾಡುವುದಕ್ಕಾಗಿ ನಾಗಪುರದಿಂದ ಹೋಗಿದ್ದ ಪೊಲೀಸ್ ಅಧಿಕಾರಿಯ ಮೇಲೆ ಮಿಶ ...
ಭಾರತೀಯ ಸಂವಿಧಾನವನ್ನು ಟೀಕಿಸಿದ ಗೋಳ್ವಾಲ್ಕರ್, ಓರ್ವ ಸಾಮಾನ್ಯ ವ್ಯಕ್ತಿ ಅರ್ಥ ಮಾಡ ...